ಇಂದು ನಾಗಲಮಡಿಕೆಯಲ್ಲಿ ವೈಭವದ ಸುಬ್ರಮಣ್ಯಸ್ವಾಮಿ ಬ್ರಹ್ಮರಥೋತ್ಸವ

KannadaprabhaNewsNetwork |  
Published : Dec 26, 2025, 01:15 AM IST
ಪೊಟೋ 25ಪಿವಿಡಿ1ಪೊಟೋ25ಪಿವಿಜಿ1ಪಾವಗಡ ತಾಲೂಕು ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ | Kannada Prabha

ಸಾರಾಂಶ

ಪಾವಗಡ: ಇದೇ ಡಿ.26ಕ್ಕೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತಾಲೂಕಿನ ನಾಗಲಮಡಿಕೆ ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ 10ಗಂಟೆಗೆ ಸುಬ್ರಮಣ್ಯ ಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ ಹಮ್ಮಿಕೊಳ್ಳಲಾಗಿದೆ.

ಪಾವಗಡ: ಇದೇ ಡಿ.26ಕ್ಕೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತಾಲೂಕಿನ ನಾಗಲಮಡಿಕೆ ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ 10ಗಂಟೆಗೆ ಸುಬ್ರಮಣ್ಯ ಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ ಹಮ್ಮಿಕೊಳ್ಳಲಾಗಿದೆ.

ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ತಹಸೀಲ್ದಾರ್ ಎ.ರವಿ ರಥೋತ್ಸವ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯು ಪುಷ್ಯ ಮಾಸದ ಶುದ್ಧ ಷಷ್ಠಿಯಲ್ಲಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಶುಕ್ರವಾರದಿಂದ ಹತ್ತು ದಿನ ಕಾಲ ದನಗಳ ಪರೀಷೆ ನಡೆಯಲಿರುವುದಾಗಿ ತಾಲೂಕು ಆಡಳಿತದ ಪ್ರಕಟಣೆ ತಿಳಿಸಿದೆ.ಶ್ರೀ ಕ್ಷೇತ್ರ ನಾಗಲಮಡಿಕೆ ಇಲ್ಲಿನ ಉತ್ತರ ಪಿನಾಕಿನಿ ನದಿಯ ತಟದಲ್ಲಿ ಶೋಭಾಯಮಾನವಾಗಿರುವ ಅಂತ್ಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನವು ತನ್ನದೇ ಆದ ವಿಶೇಷತೆ ಹಾಗೂ ಇತಿಹಾಸ ಹೊಂದಿದೆ. ಶ್ರೀ ಸುಬ್ರಮಣ್ಯ ಸ್ವಾಮಿ ಬ್ರಹ್ಮಚಾರಿ ರೂಪದಲ್ಲಿ ತಾರಕಾಸುರರನ್ನು ಸಂಹರಿಸಿ ತಾರಕ ಜಿತ್ ಎಂಬ ಅಭಿನಾಮದೊಂದಿಗೆ ಈ ಪುಣ್ಯಕ್ಷೇತ್ರದಲ್ಲಿ ನೆಲೆಸಿರುವ ಬಗ್ಗೆ ಉಲ್ಲೇಖವಿದೆ. ಆಂಧ್ರ ಪ್ರದೇಶದ ಅನಂತಪುರ, ವಿಜಯವಾಡ, ಹೈದರಾಬಾದ್, ರಾಯದುರ್ಗ , ಕಲ್ಯಾಣದುರ್ಗ ಸೇರಿ ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ಶಿಮಮೊಗ್ಗ, ಬೆಳಗಾವಿ, ತುಮಕೂರು ಹಾಗೂ ಕೋಲಾರ ಮತ್ತು ರಾಜ್ಯದ ನಾನಾ ಜಿಲ್ಲೆ ಹಾಗೂ ತಮಿಳುನಾಡಿನಿಂದ 60ಸಾವಿರಕ್ಕಿಂತ ಹೆಚ್ವು ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಅಗಮಿಸಿ ಶ್ರದ್ಧಾ ಭಕ್ತಿಗಳಿಂದ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ವಿವಿಧ ಪೂಜಾ ಕಾರ್ಯಗಳೊಂದಿಗೆ ದೇವರ ದರ್ಶನಪಡೆದು ಉಪವಾಸ ಬಿಡಲಿದ್ದಾರೆ.

ಈ ಕುರಿತು ರಾಜ್ಯ ರೈತ ಸಂಘದ ಅಧ್ಯಕ್ಷರಾದ ವಿ.ನಾಗಭೂಷಣ ರೆಡ್ಡಿ ಪ್ರತಿಕ್ರಿಯಿಸಿ, ಐತಿಹಾಸಿಕ ಹಿನ್ನೆಲೆಯ ಇಲ್ಲಿನ ಶ್ರೀ ಸ್ವಾಮಿಗೆ 400 ವರ್ಷಗಳ ಇತಿಹಾಸವಿದೆ. ಅಂತ್ಯ ಸುಬ್ರಮಣ್ಯಸ್ವಾಮಿ ಎಂದು ಖ್ಯಾತಿಗೆ ಒಳಪಟ್ಡಿದೆ. ನಾಗರ ಹಾವಿನ ರೀತಿ ಇರುವ ಕಾರಣ, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯಸ್ವಾಮಿ ತಲೆ. ಚಿಕ್ಕಬಳ್ಳಾಪುರದ ಶ್ರೀ ಸ್ವಾಮಿ ಮಧ್ಯ ಹಾಗೂ ಇಲ್ಲಿನ ನಾಗಲಮಡಿಕೆ ಶ್ರೀ ಸುಬ್ರಮಣ್ಯಸ್ವಾಮಿ ಅಂತ್ಯ, ಅಂದರೆ ಕೊನೆಯ ಭಾಗವಾಗಿದೆ. ಹೀಗಾಗಿ ಇಲ್ಲಿನ ದೇವಸ್ಥಾನವು ಅಂತ್ಯ ಸುಬ್ರಮಣ್ಯಸ್ವಾಮಿ ಎಂದು ಹೆಸರು ಗಳಿಸಿದೆ ಎಂದು ತಿಳಿಸಿದರು.

ಸಕಲ ಸಿದ್ಧತೆ:

ಜಾತ್ರೆ ಪ್ರಯುಕ್ತ, ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದು, ಕುಡಿಯುವ ನೀರು, ದೇವಸ್ಥಾನದ ಮುಂಭಾಗ ಹರಿಯುವ ಉತ್ತರಪಿನಾಕಿನಿ ನದಿಯಲ್ಲಿ ಸ್ನಾನಕ್ಕೆ ವ್ಯವಸ್ಥೆ, ಭಕ್ತರು ಸರದಿ ಸಾಲಿನಲ್ಲಿ ತೆರಳಲು ಬ್ಯಾರಿಕೇಡ್ ನಿರ್ಮಾಣ ಸೇರಿ ಕಳ್ಳರ ಹಾವಳಿ ತಪ್ಪಿಸಲು ಬಿಗಿ ಪೊಲೀಸ್ ಭದ್ರತೆ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಡಿಗಳ ನಿರ್ಮಾಣ ಇತರೆ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ ಎಂದು ತಹಸೀಲ್ದಾರ್ ಎ.ರವಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರಲು ಪಾವಗಡದಿಂದ ಪ್ರತಿ 10 ನಿಮಿಷಕ್ಕೊಮ್ಮೆ ಸರ್ಕಾರಿ ಸೌಲಭ್ಯ ಕಲ್ಪಿಸಲಾಗಿದೆ.

-------

ಪೊಟೋ25ಪಿವಿಜಿ1

ಪಾವಗಡ ತಾಲೂಕು ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ಸುಲಿಗೆ
ಭಾರತ ಅಭಿವೃದ್ಧಿ ರಥಕ್ಕೆ ರಾಜಮಾರ್ಗ ನಿರ್ಮಿಸಿದ ವಾಜಪೇಯಿ