ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಿವ್ಯೂ ಥಿಯೇಟರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವನ್ನು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ಖಾನ್ ಉದ್ಘಾಟಿಸುವರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅಧ್ಯಕ್ಷತೆ ವಹಿಸುವರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಂಜಾಬ್ ನ್ಯಾಷನಲ್ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಬಿನೋದ್ಕುಮಾರ್, ತಮಿಳುನಾಡು ಕೇಂದ್ರೀಯ ವಿವಿ ಕುಲಪತಿ ಪ್ರೊ.ಎಂ. ಕೃಷ್ಣನ್, ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.
ಈ ಸಮ್ಮೇಳನದಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಪಾಂಡಿಚೇರಿ, ಲಕ್ಷ ದ್ವೀಪದಲ್ಲಿ ಅಧಿಕೃತ ಭಾಷೆಯಾದ ಹಿಂದಿ ಅನುಷ್ಠಾನದಲ್ಲಿ ಆಗಿರುವ ಪ್ರಗತಿ ವರದಿ ಮಂಡಿಸಲಾಗುವುದು. ಇದೇ ವೇಳೆ ಇಲ್ಲಿನ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕುಗಳಲ್ಲಿ ಭಾಷಾ ಅನುಷ್ಠಾನಗೊಳಿಸಿದ 32 ಉತ್ತಮ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಲಾಗುವುದು ಎಂದರು.ಸರ್ಕಾರಿ ಕೆಲಸಗಳಲ್ಲಿ ಹಿಂದಿಯ ಪ್ರಗತಿಪರ ಬಳಕೆಯನ್ನು ಉತ್ತೇಜಿಸಲು ಅಧಿಕೃತ ಭಾಷಾ ಇಲಾಖೆಯು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಈ ಅನುಕ್ರಮದಲ್ಲಿ ಪ್ರತಿ ಆರ್ಥಿಕ ವರ್ಷದಲ್ಲಿ ನಾಲ್ಕು ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನಗಳನ್ನು ಆಯೋಜಿಸಲಾಗುತ್ತದೆ. ಇದು 2024-25 ನೇ ಸಾಲಿನ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು.
ಅಧಿಕೃತ ಭಾಷಾ ಇಲಾಖೆಯ ಉಪ ಕಾರ್ಯದರ್ಶಿ ಅನಿಲ್ ಕುಮಾರ್, ಉಪ ನಿರ್ದೇಶಕ ಅನಿರ್ಬನ್ ಕುಮಾರ್ ಬಿಸ್ವಾಸ್, ಸಿಐಐಎಲ್ ನಿರ್ದೇಶಕ ಪ್ರೊ. ಶೈಲೇಂದ್ರ ಮೋಹನ್, ಎಸ್ ಬಿಐ ಮುಖ್ಯ ವ್ಯವಸ್ಥಾಪಕಿ ಗಿರಿಜಾ ಕಂಬಾರ್ ಇದ್ದರು.