)
ಲೋಕಾಪುರ: ಕಾಡರಕೊಪ್ಪ ರಸ್ತೆಯ ಶಂಭುಲಿಂಗಾನಂದ ಮಠದ ಆಡಳಿತ ಮಂಡಳಿ, ಹಿರಿಯ ನಾಗರಿಕರ ಸೇವಾ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಲೋಕಕಲ್ಯಾಣಕ್ಕಾಗಿ ಶ್ರೀಮದ್ ಭಗವದ್ಗೀತಾ ಅಭಿಯಾನವನ್ನು ಜೂ.29ರಂದು ಸಂಜೆ 6ಕ್ಕೆ ಹಮ್ಮಿಕೊಳ್ಳಲಾಗಿದೆ.
ಪ್ರತಿ ತಿಂಗಳ ಕೊನೆಯ ಸೋಮವಾರದ ಸಂಜೆ 6 ರಿಂದ 9 ಗಂಟೆಯವರೆಗೆ ಶಂಭುಲಿಂಗಾನಂದ ಮಠದ ಕಾಡರಕೊಪ್ಪ ರಸ್ತೆ, ಲೋಕಾಪುರ ಇಲ್ಲಿ ನಡೆಸುವುದೆಂದು ಸಂಕಲ್ಪ ಮಾಡಲಾಗಿದೆ. ಕಾರಣ ಲೋಕಾಪುರ ಹಾಗೂ ಸುತ್ತಲಿನ ಗ್ರಾಮಗಳ ಮಠಾಧೀಶರು, ಸಮಸ್ತ ಭಕ್ತರು ಈ ಕಾರ್ಯಕ್ರಮಕ್ಕೆ ಪ್ರತಿ ತಿಂಗಳೂ ಆಗಮಿಸಿ ಸದುಪಯೋಗ ಪಡಿಸಿಕೊಳ್ಳ ಕೋರಲಾಗಿದೆ. ಕಾರ್ಯಕ್ರಮದ ಮುಗಿದ ನಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ನಾಗರಿಕ ವೇದಿಕೆ ಕಾರ್ಯದರ್ಶಿ ವಿ.ಬಿ.ಮಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.