ಇಂದಿನ ಪೀಳಿಗೆ ಸಂಪ್ರದಾಯ ಮರೆಯಬಾರದು: ಸೋಮಶೇಖರ್‌

KannadaprabhaNewsNetwork |  
Published : Aug 19, 2024, 12:45 AM IST
ಚಿಕ್ಕಮಗಳೂರಿನ ಕೋಟೆ ಬಡಾವಣೆಯ ವಿಜಯಲಕ್ಷ್ಮಿ ಅವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಶ್ರಾವಣ ಸಂಜೆ ಕಾರ್ಯಕ್ರಮದಲ್ಲಿ ಬಿಸಲೇಹಳ್ಳಿ ಸೋಮಶೇಖರ್ ಅವರು ಮಾತನಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಆಧುನಿಕತೆ ಅಬ್ಬರದ ನಡುವೆ ಇಂದಿನ ಪೀಳಿಗೆ ನಮ್ಮ ಸಂಸ್ಕೃತಿ ಸಂಪ್ರದಾಯ ಆಚಾರ ವಿಚಾರ ಹಬ್ಬ ಹರಿದಿನಗಳ ಆಚರಣೆಗಳನ್ನು ಕಡೆಗಣಿಸಬಾರದು ಎಂದು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಬಿಸಲೇಹಳ್ಳಿ ಸೋಮಶೇಖರ್ ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಆಧುನಿಕತೆ ಅಬ್ಬರದ ನಡುವೆ ಇಂದಿನ ಪೀಳಿಗೆ ನಮ್ಮ ಸಂಸ್ಕೃತಿ ಸಂಪ್ರದಾಯ ಆಚಾರ ವಿಚಾರ ಹಬ್ಬ ಹರಿದಿನಗಳ ಆಚರಣೆಗಳನ್ನು ಕಡೆಗಣಿಸಬಾರದು ಎಂದು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಬಿಸಲೇಹಳ್ಳಿ ಸೋಮಶೇಖರ್ ಕಿವಿಮಾತು ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಮಹಿಳಾ ಘಟಕ ನಗರದ ಕೋಟೆ ಬಡಾವಣೆ ವಿಜಯಲಕ್ಷ್ಮಿ ಅವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಶ್ರಾವಣ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ಧರ್ಮ, ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರ, ಹಬ್ಬ ಹರಿದಿನಗಳಿಗೆ ಜಗತ್ತಿನ ಬಹುತೇಕ ದೇಶಗಳ ಜನತೆ ಆಕರ್ಷಿತರಾಗಿದ್ದಾರೆ. ಆದರೆ, ನಮ್ಮ ಯುವ ಜನತೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ನಮ್ಮ ಆಚರಣೆ ಗಳಿಂದ ವಿಮುಖರಾಗುತ್ತಿದ್ದಾರೆ ಎಂದು ವಿಷಾದಿಸಿದರು.

ನಮ್ಮ ಧರ್ಮ, ಸಂಸ್ಕೃತಿ, ಸಂಪ್ರದಾಯ ಜಗತ್ತಿಗೇ ಮಾದರಿಯಾಗಿವೆ. ನಾವು ಅವುಗಳನ್ನು ಕೈಬಿಟ್ಟರೆ ನಮ್ಮತನವನ್ನೇ ಕಳೆದುಕೊಂಡಂತೆ ಎಂದು ಎಚ್ಚರಿಸಿದ ಅವರು, ಈ ನಿಟ್ಟಿನಲ್ಲಿ ಇಂದಿನ ಪೀಳಿಗೆ ಚಿಂತನೆ ನಡೆಸಬೇಕು. ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ಗೀತಾ ಮೂರ್ತಿ, ನಮ್ಮ ಹಬ್ಬ ಹರಿದಿನಗಳು ಸಂಸ್ಕೃತಿ ಸಂಪ್ರದಾಯಗಳು ಭಾವೈಕ್ಯತೆ ಬೆಳೆಸಲು ಸಹಕಾರಿ ಎಂದು ಹೇಳಿದರು. ಕಸಾಪ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ನಮ್ಮ ಸಂಸ್ಕೃತಿ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಮನೆ ಮನೆಗಳಲ್ಲಿ ಇಡೀ ತಿಂಗಳು ನಡೆಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಕಸಾಪ ಮಹಿಳಾ ಘಟಕದ ಕಾರ್ಯದರ್ಶಿ ರೂಪಾ ನಾಯಕ್ ಮಾತನಾಡಿ, ಶ್ರಾವಣ ಮಾಸದ ಮಹತ್ವ ಮತ್ತು ಅದರ ಆಚರಣೆ ವಿವರಿಸಿ ಶ್ರಾವಣ ಮಾಸ ಅತ್ಯಂತ ಪವಿತ್ರವಾದ ಮಾಸ. ಇಡೀ ವರ್ಷದ ಬಹುತೇಕ ಹಬ್ಬಗಳು ಶ್ರಾವಣ ಮಾಸದಲ್ಲಿ ಬರುವುದರಿಂದ ಶ್ರಾವಣ ಮಾಸವನ್ನು ಮಾಸಗಳ ರಾಜ ಎಂದು ಕರೆಯುತ್ತಾರೆ ಎಂದು ಹೇಳಿದರು.

ಕಸಾಪ ತಾಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೈಲಾ ಬಸವರಾಜ್, ಖಜಾಂಚಿ ಮಹಾಲಕ್ಷ್ಮಿ, ನಗರ ಘಟಕದ ಅಧ್ಯಕ್ಷ ಸಚ್ಚಿನ್, ಪದಾಧಿಕಾರಿಗಳಾದ ವೀಣಾ ಮಲ್ಲಿಕಾರ್ಜುನ್, ಓಂಕಾರಪ್ಪ, ಉಪನ್ಯಾಸಕಿ ಆಶಾ ರಾಜು ಉಪಸ್ಥಿತರಿದ್ದರು.

18 ಕೆಸಿಕೆಎಂ 3ಚಿಕ್ಕಮಗಳೂರಿನ ಕೋಟೆ ಬಡಾವಣೆ ವಿಜಯಲಕ್ಷ್ಮಿ ಅವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಶ್ರಾವಣ ಸಂಜೆ ಕಾರ್ಯಕ್ರಮದಲ್ಲಿ ಬಿಸಲೇಹಳ್ಳಿ ಸೋಮಶೇಖರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರಿ, ಮೇಕೆ ಸಾಕಾಣಿಕೆ ಲಾಭದಾಯಕ ಉದ್ಯಮವಾಗಿ ಪರಿವರ್ತನೆ: ಡಾ. ಸಿದ್ದಲಿಂಗಯ್ಯ
ಶಿಕ್ಷಣಕ್ಕಿದೆ ಜಗತ್ತು ಬದಲಿಸುವ ಶಕ್ತಿ: ರಾಜಕುಮಾರ ಅಗಡಿ