ಕನ್ನಡಪ್ರಭ ವಾರ್ತೆ ಮೈಸೂರು
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ಐಶ್ವರ್ಯ ರಾಯಲ್ ಬಡಾವಣೆಯಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬಡಾವಣೆಯ ಎಲ್ಲರೂ ಒಟ್ಟಾಗಿ ಸೇರಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಸಂತಸದ ವಿಚಾರ. ಸ್ಥಳೀಯವಾಗಿ ಒಟ್ಟಾಗಿ ರಾಷ್ಟ್ರೀಯ ಹಬ್ಬಗಳನ್ನು ಆಚರಣೆ ಮಾಡುವುದರಿಂದ ಒಂದಾಗಬಹುದಾಗಿದೆ ಎಂದರು.
ದೇಶದ ಏಕತೆ, ಅಖಂಡತೆ, ಸಮಗ್ರತೆ ಐಕ್ಯತೆ, ಬದ್ಧತೆ, ಆರ್ಥಿಕತೆ ಎಲ್ಲಾ ದೃಷ್ಟಿಯಿಂದಲೂ ಒಟ್ಟಾಗಿ ಸೇರಿಸಿ ಭಾರತ ಒಂದೇ ಎನ್ನುವ ಸಂದೇಶ ನೀಡಿದ್ದಾರೆ. ತ್ಯಾಗ, ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅಂತಹ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಬೇಕು ಎಂದು ಅವರು ಸಲಹೆ ನೀಡಿದರು.ಅಸಮಾನತೆ ತೊಲಗಿಸಿ ಸಮಾನತೆ ತರಬೇಕು. ಜಾತೀಯತೆ ಬಿಟ್ಟು ನಾವೆಲ್ಲರೂ ಸಮಾನರು ಎನ್ನುವುದನ್ನು ಹೇಳಬೇಕು. ನಾವೆಲ್ಲರೂ ಒಂದೇ ಭಾರತೀಯರು, ಸಮಾನತೆಯುಳ್ಳವರು ಎನ್ನುವ ಆಶಯ ಇಟ್ಟುಕೊಂಡು ಸಮಾಜಕ್ಕೆ ಶ್ರಮಿಸಬೇಕು ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಪ್ರಪಂಚವೇ ಮೆಚ್ಚುವಂತಹ ಸಂವಿಧಾನ ಕೊಟ್ಟಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು ಎನ್ನುವಂತೆ ಅಂಬೇಡ್ಕರ್ ಕಂಡಿರುವ ಕನಸು ನನಸಾಗಬೇಕು. ಸಂವಿಧಾನ ನಮಗೆ ಎಲ್ಲವನ್ನೂ ನೀಡಿದೆ. ಪ್ರತಿಯೊಬ್ಬರ ಹಕ್ಕನ್ನು ಕಾಪಾಡುತ್ತಿದೆ. ಇಂದು ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯಲ್ಲಿ. ಹೀಗಾಗಿ, ನಾವೆಲ್ಲರೂ ಸಂವಿಧಾನಕ್ಕೆ ಗೌರವ ನೀಡಿ ಯುವ ಪೀಳಿಗೆಗೆ ಮಾರ್ಗದರ್ಶನ ಮಾಡಬೇಕು ಎಂದರು.
ಮುಖಂಡರಾದ ಜಯಕುಮಾರ್, ಕೆ. ಚಂದ್ರಶೇಖರ್, ಆನಂದ್, ಮುಖ್ಯಾಧಿಕಾರಿ ಸುಜಯ್, ಎಂ.ಎಂ. ಗ್ರೀನ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಮೋಹನ್ ಕುಮಾರ್ ಮೊದಲಾದವರು ಇದ್ದರು.