ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣಭಾಯಿ ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣಭಾಯಿ ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ತೋಗಾಡಿಯಾ ಅವರು ಬಾಗಲಕೋಟೆಯಿಂದ ಮುಧೋಳ ನಗರಕ್ಕೆ ಹೊರಟಿದ್ದ ವೇಳೆ ರಸ್ತೆ ಹಂಪ್ಸ್ನಲ್ಲಿ ಬ್ರೇಕ್ ಹಾಕಿದಾಗ ಹಿಂಬದಿ ಇದ್ದ ಪೈಲಟ್ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಪೊಲೀಸ್ ಪೈಲಟ್ ವಾಹನದ ಬೋನಟ್, ಬಂಪರ್,ಲೈಟ್ ಗಾಜು ಜಖಂಗೊಂಡಿವೆ. ತೋಗಾಡಿಯಾ ತಮ್ಮ ಕಾರು ಬಿಟ್ಟು ಬೇರೆ ವಾಹನದಲ್ಲಿ ಪೊಲೀಸರು ಕರೆದೊಯ್ದರು. ಬಳಿಕ ಜಮಖಂಡಿ ಕಾರ್ಯಕ್ರಮಗಳಲ್ಲಿ ಅವರು ತೊಗಾಡಿಯಾ ಭಾಗಿಯಾದರು. ಘಟನಾ ಸ್ಥಳಕ್ಕೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ಪರಿಶೀಲನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.