ತಾಲೂಕು ಆಡಳಿತ ಸೌಧದಲ್ಲಿ ಶೌಚಾಲಯ ಸಮಸ್ಯೆ

KannadaprabhaNewsNetwork |  
Published : Dec 09, 2023, 01:15 AM IST
ತಾಲ್ಲೂಕು ಆಡಳಿತ ಸೌಧದಲ್ಲಿ ಶೌಚಾಲಯದ ಸಮಸ್ಯೆ | Kannada Prabha

ಸಾರಾಂಶ

ಕಳೆದ ವರ್ಷ ಸುಮಾರು ರು. ೧.೫೦ಕೋಟಿ ವೆಚ್ಚದಲ್ಲಿ ನವೀಕರಣಗೊಂಡಿರುವ ಕಟ್ಟಡದಲ್ಲಿ ಇಂದಿಗೂ ಚಿಕ್ಕಪುಟ್ಟ ಕೆಲಸಗಳು ಬಾಕಿಯಾಗಿದ್ದು, ಗುತ್ತಿಗೆದಾರರಿಗೆ ಮಾತ್ರ ಪೂರ್ಣ ಬಿಲ್ ಪಾವತಿಸಲಾಗಿದ್ದು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಆಡಳಿತ ಸೌಧದಲ್ಲಿ ಶೌಚಾಲಯದ ಸಮಸ್ಯೆಯಿಂದ ಕಚೇರಿ ಕೆಲಸಕ್ಕೆ ಆಗಮಿಸುವ ಜನರು ಪರದಾಡುವಂತಾಗಿದೆ.

ಕಳೆದ ವರ್ಷ ಸುಮಾರು ರು. ೧.೫೦ಕೋಟಿ ವೆಚ್ಚದಲ್ಲಿ ನವೀಕರಣಗೊಂಡಿರುವ ಕಟ್ಟಡದಲ್ಲಿ ಇಂದಿಗೂ ಚಿಕ್ಕಪುಟ್ಟ ಕೆಲಸಗಳು ಬಾಕಿಯಾಗಿದ್ದು, ಗುತ್ತಿಗೆದಾರರಿಗೆ ಮಾತ್ರ ಪೂರ್ಣ ಬಿಲ್ ಪಾವತಿಸಲಾಗಿದ್ದು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.

ಕಟ್ಟಡದಲ್ಲಿ ೪ ಶೌಚಗೃಹ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಸಾರ್ವಜನಿಕರಾಗಿ ಎರಡನ್ನು ಮೀಸಲಿಡಲಾಗಿದೆ. ಆದರೆ ಇದುವರೆಗೆ ಬೀಗ ತೆಗೆದಿಲ್ಲ. ಎರಡು ಶೌಚಗೃಹವನ್ನು ಇಲಾಖೆಯ ಸಿಬ್ಬಂದಿ ಉಪಯೋಗಿಸಿಕೊಂಡು ಬೀಗ ಜಡಿಯುತ್ತಾರೆ.

ಪ್ರತಿದಿನ ಕೆಲಸಕ್ಕಾಗಿ ನೂರಾರು ಸಾರ್ವಜನಿಕರು ತಾಲೂಕು ಕಚೇರಿಗೆ ಆಗಮಿಸುತ್ತಾರೆ. ಅದರಲ್ಲೂ ಮಹಿಳೆಯರು, ವೃದ್ಧರು ಕೆಲಸಕ್ಕಾಗಿ ಸಂಜೆ ವರೆಗೂ ಕಾಯುತ್ತಿರುತ್ತಾರೆ. ಅವರ ಸಮಸ್ಯೆಯನ್ನು ಯಾರೊಂದಿಗೂ ಹೇಳಿಕೊಳ್ಳಲು ಸಾಧ್ಯವಾಗದೆ ಪರದಾಡುತ್ತಿರುತ್ತಾರೆ.

ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್‌ಗೆ ಹೋದರೆ, ಮಹಿಳೆಯರು ಶೌಚಕ್ಕೆ ೫ ರು. ಕೊಡಬೇಕಾಗಿದೆ. ಬುಧವಾರ ವೃದ್ದೆಯೊಬ್ಬರು ತಡೆಯಲಾದರೆ, ವೆರಾಂಡದಲ್ಲೇ ಮೂತ್ರವಿಸರ್ಜನೆ ಮಾಡಿಕೊಂಡ ಪ್ರಸಂಗ ನಡೆದಿದ್ದು, ಶೌಚಗೃಹ ವ್ಯವಸ್ಥೆ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಗುತ್ತಿಗೆದಾರರು ಬಿಲ್ ತಗೊಂಡಿದ್ದಾರೆ. ಕಾಮಗಾರಿ ಮುಗಿಸಿಲ್ಲ. ಪಿಟ್ ನೀರಿನ ವ್ಯವಸ್ಥೆ ಆಗಿದೆ. ಇನ್ನೊಂದಿಷ್ಟು ಕೆಲಸ ಬಾಕಿಯಿದೆ. ಈಗಾಗಲೇ ಗುತ್ತಿಗೆದಾರರಿಗೆ ತಿಳಿಸಿದ್ದೇನೆ. ಕಾಮಗಾರಿ ಮುಗಿಸಿದ ತಕ್ಷಣ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿಕೊಡಲಾಗುವುದು.

-ಎಸ್.ಎನ್.ನರಗುಂದ, ತಹಸೀಲ್ದಾರ್, ಸೋಮವಾರಪೇಟೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''