ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲೆಯಲ್ಲಿ ಮೊದಲ ಬಾರಿಗೆ 2 ಟೋಲ್ ಗೇಟ್ ಸ್ಥಾಪಿಸಲಾಗಿದ್ದು, ಇನ್ಮುಂದೆ ಟೋಲ್ ಪಾವತಿಸಿ ಜನರು ಸಂಚರಿಸಬೇಕಾದ ಅನಿವಾರ್ಯತೆ ಇದೆ. ಶಿವಮೊಗ್ಗ – ಸವಳಂಗ ನಡುವೆ 1 ಟೋಲ್ ಗೇಟ್ ಸ್ಥಾಪಿಸಲಾಗಿದೆ. ಶಿಕಾರಿಪುರ– ಶಿರಾಳಕೊಪ್ಪ ನಡುವೆ ಇನ್ನೊಂದು ಟೋಲ್ ನಿರ್ಮಿಸಲಾಗಿದೆ. ಆದರೆ, ಈ ಭಾಗದ ರಸ್ತೆಯಲ್ಲಿ ಶಿಕಾರಿಪುರ, ಸೊರಬ ತಾಲೂಕಿನ ನೂರಾರು ಹಳ್ಳಿಯ ರೈತರು ಒಂದಿಲ್ಲೊಂದು ಕಾರಣಕ್ಕೆ ಶಿಕಾರಿಪುರ ಹಾಗೂ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಮುಂದೆ ಇವರೆಲ್ಲರು ಟೋಲ್ ಕಟ್ಟಿ ಮುಂದೆ ಸಾಗಬೇಕಿದೆ.
ರಾಜ್ಯ ಹೆದ್ದಾರಿಯನ್ನು ಹೊಸದಾಗಿ ನಿರ್ಮಿಸದೇ ಈ ಹಿಂದಿನಿಂದಲೂ ಇದ್ದ ರಸ್ತೆಗೆ ಟೋಲ್ ಕಟ್ಟಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಹೆದ್ದಾರಿಗೆ ಟೋಲ್ ಹಾಕಲಾಗಿದೆ. ಎರಡು ಪಥದ ರಸ್ತೆ ಇದು. ಇದನ್ನೇನು ಹೊಸದಾಗಿ ನಿರ್ಮಿಸಿಲ್ಲ. ಈ ಮೊದಲಿನಿಂದಲು ಇರುವ ರಸ್ತೆಗೆ ಟೋಲ್ ಕಟ್ಟಿಸಿಕೊಳ್ಳುವ ಸರ್ಕಾರದ ನಿರ್ಧಾರ ಸರಿಯಾದುದ್ದಲ್ಲ ಎಂಬುದು ಜನರ ವಾದ.ಗಾರ್ಮೆಂಟ್ಗೆ ತೆರಳುವ ಕೆಲಸಗಾರರನ್ನು ಹಾಗೂ ವಿದ್ಯಾರ್ಥಿಗಳನ್ನು ಹೊತ್ತು ಸಾಗುವ ಹಲವು ವಾಹನಗಳು ಟೋಲ್ ಕಟ್ಟಿಬೇಕಿದೆ. ಇದರಿಂದ ಸಂಚಾರ ವೆಚ್ಚದ ಬರೆ ಜನರ ಮೇಲೆ ಬೀಳಲಿದೆ. ಇಂದು ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರು ತೀವ್ರ ಅನುಭವಿಸಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಯಾವುದೇ ಟೋಲ್ ಸಂಗ್ರಹಕ್ಕೆ ಸರ್ಕಾರ ಅವಕಾಶ ಕೊಡದೇ, ಈಗ ನಿರ್ಮಿಸಿರುವ ಟೋಲ್ಗಳನ್ನು ರದ್ದುಪಡಿಸಬೇಕು ಎಂಬುದು ಜನರ ಒತ್ತಾಯ.
ತೀವ್ರ ವಿರೋಧದ ನಡುವೆ ಜಿಲ್ಲೆಯಲ್ಲಿ ಎರಡು ಟೋಲ್ ಸ್ಥಾಪನೆಯಾಗಿವೆ. ರಸ್ತೆ ನಿರ್ಮಾಣಕ್ಕೆ ಪಡೆದ ಸಾಲ ತೀರಿಸಲು ಸುಂಕ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪವಿದೆ. ಕೋವಿಡ್ ಹಾವಳಿ ಕಾರಣಕ್ಕೆ ಟೋಲ್ ಗೇಟ್ ಸ್ಥಾಪನೆ ವಿಳಂಬವಾಗಿತ್ತು. ಈಗ ಜಿಲ್ಲೆಯಲ್ಲಿ ಮೊದಲ ಬಾರಿ ಟೋಲ್ ಗೇಟ್ಗಳನ್ನು ಸ್ಥಾಪಿಸಲಾಗಿದೆ.
ಟೋಲ್ಗೇಟ್ ವ್ಯವಸ್ಥೆಗಳು ಹೇಗಿವೆ?:
- - -ಬಾಕ್ಸ್ ಟಿಕೆಟ್ ದರ, ಬಾಡಿಗೆ ಹೆಚ್ಚಳ ಆತಂಕ ಶಿವಮೊಗ್ಗ– ಶಿಕಾರಿಪುರ– ಶಿರಾಳಕೊಪ್ಪ ಮಧ್ಯೆ ಹತ್ತಾರು ಬಸ್ಸುಗಳು ನಿತ್ಯ ಸಂಚರಿಸುತ್ತಿವೆ. ಡಿಸೇಲ್ ದರ ಹೆಚ್ಚಳ, ಶಕ್ತಿ ಯೋಜನೆಯ ಪರಿಣಾಮ, ಟ್ಯಾಕ್ಸ್, ಬಸ್ಸುಗಳ ನಿರ್ವಹಣೆ ಖರ್ಚು ನಿಭಾಯಿಸಲು ಮಾಲೀಕರು ಹೆಣಗಾಡುತ್ತಿದ್ದಾರೆ. ಶಿವಮೊಗ್ಗ ಹಾನಗಲ್ ನಡುವೆ ಸಂಚರಿಸುವ ಬಸ್ಗೆ ಅಂದಾಜು ₹120 ಟಿಕೆಟ್ ದರ ಇದೆ. ಟೋಲ್ ಗೇಟ್ ನಿರ್ಮಾಣದ ನಂತರ ಬಸ್ ದರ ಹೆಚ್ಚಳ ಸಾಧ್ಯತೆ ಇದೆ. ಇನ್ನು, ಗೂಡ್ಸ್ ವಾಹನಗಳು ಕೂಡ ಟೋಲ್ ದರ ನಿಭಾಯಿಸಲು ಬಾಡಿಗೆ ಹೆಚ್ಚಳ ಮಾಡಬೇಕಾಗುತ್ತದೆ. ಇದರಿಂದ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯೂ ಎದುರಾಗಿದೆ.
ಶಿವಮೊಗ್ಗ– ಶಿಕಾರಿಪುರ ರಸ್ತೆಗಳಲ್ಲಿ 2 ಕಡೆ ಟೋಲ್ಗೇಟ್ಗಳು ನಿರ್ಮಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಟೋಲ್ ಹಾಕಿ ಹಣ ವಸೂಲಿ ಮಾಡಲು ಹೊರಟಿದೆ. ಟೋಲ್ ನೀತಿ ಜಾರಿ ಆಗುತ್ತಿರೋದನ್ನು ನಾವು ವಿರೋಧಿಸುತ್ತೇವೆ
- - - -25ಎಸ್ಎಂಜಿಕೆಪಿ02: