ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವು ಮೂರುವರೆ ವರ್ಷದ ಹಿಂದೆ ಕೆಐಎಡಿಬಿ ಮೂಲಕ ರೈತರಿಗೆ ನೋಟಿಸ್ ನೀಡಿತ್ತು. ಅನ್ನ ಬೆಳೆಯುವ ಭೂಮಿಯಲ್ಲಿ ಕೈಗಾರಿಕೆಗಳು ಕಟ್ಟುತ್ತಾರಂತೆ, ಯಾವುದೋ ಕೈಗಾರಿಕೋದ್ಯಮಿಗಳನ್ನು ಉದ್ದಾರ ಮಾಡಲು, ಇದೇ ಭೂಮಿಯನ್ನು ನಂಬಿ ಬದುಕುತ್ತಿರುವ ನಮ್ಮ ರೈತರನ್ನು ಅನಾಥರನ್ನಾಗಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಅಂತಿಮ ನೋಟಿಸ್ಸರ್ಕಾರದ ಅನ್ಯಾಯವನ್ನು ವಿರೋಧಿಸಿ ರೈತರು ತಮ್ಮ ಪ್ರಾಣ ಹೋದರೂ ಭೂಮಿಯನ್ನು ಬಿಡುವುದಿಲ್ಲ ಎಂದು ಕಳೆದ ಮೂರುವರೆ ವರ್ಷಗಳಿಂದ ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ಹೋರಾಟ ಪ್ರಾರಂಭವಾದ ನಂತರ ಸರ್ಕಾರಗಳೇ ಬದಲಾಗಿದೆ, ಆದರೆ ರೈತರಿಗೆ ಮಾತ್ರ ನ್ಯಾಯ ಸಿಕ್ಕಿಲ್ಲ. ರೈತರು ಬೀದಿಯಲ್ಲಿ ಕುಳಿತು ವರ್ಷಗಳೇ ಕಳೆದರೂ, ಅಧಿಕಾರಕ್ಕೆ ಬಂದ ಎಲ್ಲರೂ ಅಂತಿಮ ನೋಟಿಸ್ ನೀಡಿದ್ದಾರೆ. ಹೀಗೆಯೇ ಬಿಟ್ಟರೆ ಇನ್ನು ಕೆಲವೇ ದಿನಗಳಲ್ಲಿ ನಮ್ಮ ರೈತರ ಎಲ್ಲ ಭೂಮಿಯನ್ನು ಕಬಳಿಸಿಯೇ ತೀರುತ್ತಾರೆ. ಇವರು ಹೋಗುತ್ತಿರುವ ರಭಸ ನೋಡಿದರೆ ರಾಜ್ಯದ ಯಾವ ರೈತರ ಕೈಯಲ್ಲೂ ಒಂದು ಇಂಚು ಭೂಮಿ ಇರಲು ಬಿಡುವುದಿಲ್ಲ ಈ ಭೂಗಳ್ಳರು. ಇನ್ನು ಸುಮ್ಮನಿರಲು ಸಾಧ್ಯವಿಲ್ಲ. ಇವರಿಗೆ ಬುದ್ಧಿ ಕಲಿಸಲೇಬೇಕು ಎಂದರು.
ನಮ್ಮ ಮುಖ್ಯಮಂತ್ರಿಗಳು, ಸದಾ ಬಡವರ ಪರ, ನುಡಿದಂತೆ ನಡೆಯುವ ಸರ್ಕಾರ ಎಂದು ಭಾಷಣ ಮಾಡುವ ಸಿದ್ದರಾಮಯ್ಯ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ, ಸ್ವತಃ ನಮ್ಮ ಧರಣಿ ವೇದಿಕೆಗೆ ಬಂದು, ಫಲವತ್ತಾದ ಕೃಷಿ ಭೂಮಿಗಳಲ್ಲಿ ಕೈಗಾರಿಕೆಗಳು ಮಾಡುವುದು ಸರಿಯಲ್ಲ, ಸಣ್ಣ ಮತ್ತು ಅತಿಸಣ್ಣ ರೈತರ ಭೂಮಿ ಯಾವುದೇ ಕಾರಣಕ್ಕೂ ಬಂಡವಾಳಶಾಹಿಗಳ ಪಾಲಾಗಲು ಬಿಡುವುದಿಲ್ಲ ಎಂದು ಹೇಳಿ ನಮ್ಮ ಹೋರಾಟವನ್ನು ಬೆಂಬಲಿಸಿದ್ದವರು ಈಗ ಜಾಣ ಕಿವುಡರಾಗಿಬಿಟ್ಟಿದ್ದಾರೆ ಎಂದು ಟೀಕಿಸಿದರು.
ಸರ್ಕಾರ ಜಾಗ ಬಳಸಿಕೊಳ್ಳಲಿ
ಸುದ್ದಿಗೋಷ್ಟಿಯಲ್ಲಿ ರಾಜ್ಯ ರೈತ ಸಂಘದ ಶ್ರೀನಿವಾಸ್, ರಮೇಶ್, ಕಲ್ಯಾಣ್, ವೆಂಕಟರಾಮರೆಡ್ಡಿ, ಮತ್ತಿತರರು ಇದ್ದರು.