ನಾಳೆ ಬಲ್ಲಮಾವಟಿ ಗ್ರಾಮದ ಗ್ರಾ.ಪಂ. ಕಟ್ಟಡಗಳ ಉದ್ಘಾಟನೆ

KannadaprabhaNewsNetwork |  
Published : Jan 15, 2025, 12:47 AM IST
ಬಲ್ಲಮಾವಟಿ ಗ್ರಾಮದ  ಗ್ರಾಮ ಪಂಚಾಯಿತಿ ಭಾರತ ನಿರ್ಮಾಣ ಸೇವಾ ಕೇಂದ್ರ ,ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ- ಅರಿವು ಕೇಂದ್ರದ ನೂತನವಾಗಿ ನಿರ್ಮಾಣಗೊಂಡಿರುವ  ಕಟ್ಟಡ. | Kannada Prabha

ಸಾರಾಂಶ

ಬಲ್ಲಮಾವಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಜ. 16ರಂದು ನಡೆಯಲಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಭಾರತ ನಿರ್ಮಾಣ ಸೇವಾ ಕೇಂದ್ರ, ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ- ಅರಿವು ಕೇಂದ್ರ ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಜ. 16 ರಂದು ನಡೆಯಲಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಪಿ ಶಾಂತಿ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಟ್ಟಡಗಳ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್ ಬೋಸರಾಜು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಎಂ.ಪಿ ಸುಜಾ ಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಡಾ. ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಎನ್.ವಿ ಪ್ರಸಾದ್, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ ಪಿ ರಾಮರಾಜನ್ ಕೆ., ಕೊಡಗು ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್ ಜಿ, ಮಡಿಕೇರಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಬಿ.ಎಸ್ , ಚಂದ್ರಶೇಖರ್, ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''