ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾಜ್ಯಮಟ್ಟದ ಕನಕ ಕಥಾಕೀರ್ತನ ಮಹೋತ್ಸವ ಸಮ್ಮೇಳನ ತರಬೇತಿ ಕಾರ್ಯಾಗಾರ, ಹಾಲುಮತ ಸಂಸ್ಕೃತಿ, ಕನಕ ಕಲಾ ವೈಭವ, ಗೀತಗಾಯನ, ನೃತ್ಯರೂಪಕ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ರಾಜ್ಯಮಟ್ಟದ ಕನಕದಾಸರ ಗೀತ ಗಾಯನ ಸ್ಪರ್ಧೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಯಿಂದ 27 ಕಲಾ ತಂಡದ 400 ಜನ ಕಲಾವಿದರು ಭಾಗವಹಿಸಲಿದ್ದಾರೆ. ಕನಕದಾಸರ ತತ್ವ ಆದರ್ಶ ಕೀರ್ತನೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಈಶ್ವರಾನಂದಪುರಿ ಮಹಾಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಪತಂಜಲಿ ಸಂಸ್ಥೆ ಗೌರವಾಧ್ಯಕ್ಷ ಎಂ.ಈಶ್ವರಪ್ಪ ನವುಲೆ ವಹಿಸಲಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಮಾಜದ ಮುಖಂಡರು, ಸಂಘ ಸಂಸ್ಥೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಡಾ.ಡಿ.ಗೋಪಾಲ್ ಮತ್ತು ತಂಡ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪತಂಜಲಿ ಸಂಸ್ಥೆಯ ಗೌರವಾಧ್ಯಕ್ಷ ಎಂ.ಈಶ್ವರಪ್ಪ ನವುಲೆ, ಪ್ರಮುಖರಾದ ಡಾ.ಪಿ.ಬಾಲಪ್ಪ, ಎಂ.ಪೂವಯ್ಯ, ಪರಿಸರ ಸಿ.ರಮೇಶ್, ನಿರ್ದೇಶಕರಾದ ಸುಶೀಲ ಭವಾನಿಶಂಕರ್ರಾವ್, ಭವಾನಿಶಂಕರ್ರಾವ್, ನರಸಿಂಹಮೂರ್ತಿ, ಸರಳಾವಾಸನ್, ಶೋಭಾ ಅನಂದ್, ಸೌಭಾಗ್ಯ ಇನ್ನಿತರರು ಉಪಸ್ಥಿತರಿದ್ದರು.