ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಶನಿವಾರ ಇಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಅಂದು ಮಧ್ಯಾಹ್ನ 12 ಗಂಟೆಗೆ ತರಾಸು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಸಚಿವರು ಪಾಲ್ಗೊಳ್ಳುವರು. ಇದಕ್ಕೂ ಮೊದಲು 11 ಗಂಟೆಗೆ ರಾಜವೀರ ಮದಕರಿನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದೆಂದರು.
ನಾಯಕ ಸಮಾಜದ ವತಿಯಿಂದ ಪ್ರತಿ ವರ್ಷ ಮದಕರಿ ನಾಯಕರ ಮೂರು ಕಾರ್ಯಕ್ರಮಗಳ ಆಚರಿಸಿಕೊಂಡು ಬರಲಾಗುತ್ತಿದೆ. ಮದಕರಿನಾಯಕರ ಜಯಂತಿ, ಸ್ಮರಣೋತ್ಸವ ಹಾಗೂ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತಿವೆ. ಜಯಂತಿ ಆಚರಣೆಗೆ ಮೆರವಣಿಗೆ ಸೇರಿ ಅದ್ಧೂರಿ ಸ್ಪರ್ಶ ನೀಡಿದರೆ, ಸ್ಮರಣೋತ್ಸವಕ್ಕೆ ಪ್ರತಿಮೆಗೆ ಹೂ ಅಲಂಕಾರ ಮಾಡುವರ ಮೂಲಕ ನೆನಪು ಮಾಡಿಕೊಳ್ಳಲಾಗುತ್ತಿದೆ. ಪಟ್ಟಾಭಿಷೇಕ ಮಹೋತ್ಸವಕ್ಕೆ ಸಭಾ ಕಾರ್ಯಕ್ರಮ ಆಯೋಜಿಸಿ ಮದಕರಿನಾಯಕರ ಆಳ್ವಿಕೆ ಕುರಿತು ಉಪನ್ಯಾಸ ನಡೆಯಲಿವೆ. ಮದಕರಿನಾಯಕ ಯಾವುದೇ ಒಂದು ಸಮುದಾಯಕ್ಕೆ ಸೇರಿದವರಲ್ಲ. ಸರ್ವ ಸಮುದಾಯದವರು ಪಾಲ್ಗೊಂಡು ದುರ್ಗವನ್ನಾಳಿದ ದೊರೆಯ ಸಾಹಸಗಳ ಮೆಲಕು ಹಾಕುುವರೆಂದು ಹೇಳಿದರು.ರಾಜವೀರ ಮದಕರಿನಾಯಕರ ಇತಿಹಾಸ ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮದಕರಿನಾಯಕರ ಸಾಹಸ ಪಠ್ಯವಾಗಿಡಬೇಕೆಂಬುದು ನಮ್ಮ ಬೇಡಿಕೆ. ಈ ಬಗ್ಗೆ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು. ಮದಕರಿನಾಯಕ ಥೀಂ ಪಾರ್ಕ್ ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆದಿವೆ. ಸಂಸದ ಗೋವಿಂದ ಕಾರಜೋಳರ ಗಮನಕ್ಕೆ ತರಲಾಗಿದೆ. ಕೇಂದ್ರದ ಹಂತದಲ್ಲಿ ಥೀಮ್ ಪಾರ್ಕ್ ಈಗಾಗಲೇ ಪ್ರಸ್ತಾಪವಾಗಿದ್ದು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ ಮಾತನಾಡಿ, ಎಲ್ಲಾ ಮಹಾನ್ ನಾಯಕರುಗಳನ್ನು ಒಂದೊಂದು ಜಾತಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸರ್ವಧರ್ಮದವರು ಮದಕರಿನಾಯಕನ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿದರೆ ಒಳ್ಳೆಯದು. ಊರಿನ ದೊರೆಗೆ ಗೌರವ ಸಲ್ಲಿಸುವುದು ಎಲ್ಲರ ಜವಾಬ್ದಾರಿ ಎಂದರು.
ನಾಯಕ ಸಮಾಜದ ಮುಖಂಡ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ, ಪಟ್ಟಾಭಿಷೇಕ ಮಹೋತ್ಸವ ಆಚರಣೆ ಮೂಲಕ ಮದಕರಿನಾಯಕನ ಇತಿಹಾಸ ಪರಂಪರೆಯನ್ನು ಎಲ್ಲರಿಗೂ ತಿಳಿಸಬೇಕಿದೆ. ಚಿತ್ರದುರ್ಗದ ಕೋಟೆಯನ್ನು ವಿಶ್ವಪರಂಪರೆ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಂಬಂಧ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರುಗಳಿಗೆ ಮನವಿ ಅರ್ಪಿಸಲಿದ್ದಾರೆಂದು ತಿಳಿಸಿದರು. ಕಾಂಗ್ರೆಸ್ ಮುಖಂಡ ಎಚ್.ಅಂಜಿನಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಮಾಜಿ ಸದಸ್ಯ ತಿಪ್ಪೇಸ್ವಾಮಿ ಇದ್ದರು.