ನಾಳೆ ಸರಳವಾಗಿ ಹಾಲಪ್ಪ ಅವರ ಜನ್ಮದಿನಾಚರಣೆ : ರತ್ನಾಕರ

KannadaprabhaNewsNetwork |  
Published : Mar 06, 2025, 12:30 AM IST
ಫೋಟೋ 5 ಎ, ಎನ್, ಪಿ 2 ಆನಂದಪುರದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡ್  ಸೇರಿದಂತೆ ಅನೇಕರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಆನಂದಪುರ: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡ್ ತಿಳಿಸಿದರು.

ಆನಂದಪುರ: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡ್ ತಿಳಿಸಿದರು.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಮಾ.7ರ ಶುಕ್ರವಾರ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪಅವರ ಹುಟ್ಟುಹಬ್ಬವನ್ನು ಸರಳವಾಗಿ ಸಮಾಜಮುಖಿ ಕಾರ್ಯದೊಂದಿಗೆ ಆಚರಿಸುವ ಬಗ್ಗೆ ಬಿಜೆಪಿಯ ಕಾರ್ಯಕರ್ತರು ಮತ್ತು ಅಭಿಮಾನಿ ಬಳಗದವರು ತೀರ್ಮಾನಿಸಿದ್ದೆವೆ ಎಂದರು. ಹರತಾಳು ಹಾಲಪ್ಪ ಅವರಿಗೆ ಹುಟ್ಟುಹಬ್ಬವನ್ನು ಬೇರೆಯವರ ರೀತಿ ಬ್ಯಾನರ್ ಹಾಕಿ ಪ್ರಚಾರ ಮಾಡಿಕೊಂಡು ಆಚರಣೆ ಮಾಡಿಕೊಳ್ಳಲು ಇಷ್ಟವಿಲ್ಲ. ಜನ್ಮದಿನ ಆಚರಣೆ ಜನರಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಮಾಡಬೇಕು. ಜನರಿಗೆ ತೊಂದರೆ ಕೊಡುವ ಹಾಗೆ ನಡೆದುಕೊಳ್ಳುವುದು ಅವರಿಗೆ ಇಷ್ಟವಿಲ್ಲ.

ಆದ್ದರಿಂದ ಆನಂದಪುರ ಮಹಾಶಕ್ತಿ ಕೇಂದ್ರ ಹಾಗೂ ಕೋಟೆ ಕೊಪ್ಪ ಮಹಾಶಕ್ತಿ ಕೇಂದ್ರ ಇವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಸ್ಥಳೀಯ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಹೊಸನಗರ ತಾಲೂಕಿನ ಮೂಲೆ ಗದ್ದೆ ಮಠ, ರಾಮಚಂದ್ರಪುರ ಮಠ, ತೀರ್ಥಹಳ್ಳಿ ತಾಲೂಕಿನ ಗರ್ತಿ ಕೆರೆ ಮಠದ ಗೋಶಾಲೆಗಳಿಗೆ ಮೇವನ್ನು (ಹುಲ್ಲು) ನೀಡಲಾಗುವುದು. ಹಾಗೆ ಕ್ಷೇತ್ರದ ಅನೇಕ ಭಾಗಗಳಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಆನಂದಪುರ ಗ್ರಾಪಂ ಅಧ್ಯಕ್ಷ ಕೆ.ಗುರುರಾಜ್, ಉಪಾಧ್ಯಕ್ಷೆ ರೂಪಕಲಾ ನಾಗರಾಜ್, ಆನಂದಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಾಂತಪ್ಪ ಗೌಡ, ಕೋಟೆ ಕೊಪ್ಪ ಮಹಾಶಕ್ತಿ ಕೇಂದ್ರದ ಶ್ರೀಧರ ಸಂಪಳ್ಳಿ, ಮಾಮ್ಕೋಸ್ ನಿರ್ದೇಶಕ ಭರ್ಮಪ್ಪ, ಗೌತಮ್ ಪುರ ಗ್ರಾಪಂ ಸದಸ್ಯ ಪರಮೇಶಿ ಕಣ್ಣೂರ್, ದೇವು ಬೀಸನ ಗದ್ದೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!