ಕನ್ನಡಪ್ರಭ ವಾರ್ತೆ ರಾಯಚೂರು
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಲಿಂಗಸೂಗೂರು ತಾಲೂಕಿನ ಹೂವಿನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅಮರೇಗೌಡ ಮಾಲಿ ಪಾಟೀಲ್, ಮಾನವಿ ತಾಲೂಕಿನ ಕವಿತಾಳ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಲಿಯಾ ಬೇಗಂ, ಮಾನವಿ ತಾಲೂಕಿನ ರಾಜೋಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸದ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅನ್ವರ, ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯಶಿಕ್ಷಕ ಅನಂತರಾವ್, ರಾಯಚೂರು ತಾಲೂಕಿನ ಯಕ್ಲಾಸಪೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನರಸುಬಾಯಿ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ದೇವದುರ್ಗ ತಾಲೂಕಿನ ಗಾಣಧಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಗೋವಿಂದ, ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಅಮರೇಗೌಡ ಅಗಸಿಮುಂದಿನ, ಮಾನವಿ ತಾಲೂಕಿನ ಕೋನಾಪೂರಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸಂಜೀವಪ್ಪ ಕೆ., ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ನಾಗಪ್ಪ, ರಾಯಚೂರು ತಾಲೂಕಿನ ಗುಂಜಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ರಾಧಾ ಕೆ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಆಯ್ಕೆಯಾದ ಎಲ್ಲ ಶಿಕ್ಷಕರಿಗೆ ವಿವಿಧ ಗಣ್ಯರಿಂದ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.