ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 97ನೇ ಸಂಸ್ಥಾಪಕರ ದಿನಾಚರಣೆ ಸಮಾರಂಭ ಆ. 2ರಂದು ಸಂಜೆ 4.30ಕ್ಕೆ ಅಮರಗೋಳದ ಹು-ಧಾ ವಿವಿಧೋದ್ದೇಶ ಹಾಗೂ ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಆರು ಜನ ಕೈಗಾರಿಕೋದ್ಯಮಿಗಳಿಗೆ ''''ವಾಣಿಜ್ಯ ರತ್ನ'''' ಪ್ರಶಸ್ತಿ ಆಯ್ಕೆ ಮಾಡಲಾಗಿದೆ ಎಂದರು.
ಬೆಳಗಾವಿಯ ಮೆ. ಅಶೋಕ ಐರನ್ ವರ್ಕ್ಸ್ ಪ್ರೈ. ಲಿಮಿಟೆಡ್ನ ಜಯಂತ ಅಶೋಕ ಹುಂಬರವಾಡಿ, ಹುಬ್ಬಳ್ಳಿಯ ರಾಜಧಾನಿ ಮೋಟರ್ಸ್ನ ಪ್ರಕಾಶ ಬಾಫನಾ, ಕಲಬುರಗಿಯ ಮಹಾಲಕ್ಷ್ಮಿ ಡಿಸ್ಟ್ರಿಬ್ಯೂಟರ್ಸ್ನ ರವೀಂದ್ರಕುಮಾರ ಬೆಕನಾಳ, ಗದಗನ ವಿಜಯನಿಧಿ ಅಗ್ರೋ ಇಂಡಸ್ಟ್ರೀಜ್ನ ಶರಣಬಸಪ್ಪ ಸಂಗಪ್ಪ ಗುಡಿಮನಿ, ಕೊಪ್ಪಳದ ಈಶ್ವರ ಟ್ರೇಡರ್ಸ್ನ ಸಿದ್ದಣ್ಣ ಈಶ್ವರಪ್ಪ ನಾಲ್ವಾಡ್, ಹುಬ್ಬಳ್ಳಿ ದೇವಿ ಸಿಲ್ಕ್ ಕಾರ್ಪೋರೇಷನ್ ದೇವಕಿ ಯೋಗಾನಂದ ಅವರಿಗೆ ''''ವಾಣಿಜ್ಯ ರತ್ನ'''' ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.ವಿವಿಧ ಜಿಲ್ಲೆಗಳಿಂದ 20ಕ್ಕೂ ಹೆಚ್ಚು ಜನ ಉದ್ಯಮಿಗಳಿಗೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದರು. ಕೆಲವೊಂದು ಜಿಲ್ಲೆಯ ವಾಣಿಜ್ಯೋದ್ಯಮ ಸಂಸ್ಥೆಗಳು ಉದ್ಯಮಿಗಳ ಮಾಹಿತಿ ನೀಡಿದ್ದು, ಅವರನ್ನು ಆಯ್ಕೆ ಮಾಡಲಾಗಿದೆ. ಸಮಾರಂಭದಲ್ಲಿ ಸುಮಾರು 600 ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಏರೋಸ್ಪೇಸ್ ಸ್ಥಳಾಂತರಿಸಿ: ಸಂಶಿಮಠ
ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆಗೆ ಸರ್ಕಾರ ಭೂಮಿ ದರ ಹೆಚ್ಚಿಸಿರುವುದರಿಂದ ಉದ್ಯಮಿಗಳು ಮುಂದೆ ಬರುತ್ತಿಲ್ಲ. ಆದ್ದರಿಂದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ ಅವರಿಗೆ ಭೇಟಿ ಮಾಡಿ ಭೂಮಿಯ ದರ ಕಡಿಮೆ ಮಾಡುವಂತೆ ಮನವಿ ಸಲ್ಲಿಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯ ಎರಡು ಕಂಪನಿಗಳು ಕಾರ್ಯಾರಂಭ ಮಾಡಿವೆ. ಇನ್ನೂ ಎಂಟು ಕಂಪನಿಗಳು ಬರುವ ನಿರೀಕ್ಷೆ ಇದೆ ಎಂದು ಹೇಳಿದರು.