ಕನ್ನಡಪ್ರಭ ವಾರ್ತೆ ಹರಿಹರ
ತುಂಗಭದ್ರಾ ನದಿ ತೀರದಲ್ಲಿರುವ ಶ್ರೀ ಮೂಲದುರ್ಗಾ ದೇವಸ್ಥಾನ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 11ರಂದು ಸಂಜೆ 4ರಿಂದ ಕೋಡಿಯಾಲ ಹೊಸಪೇಟೆ ಗ್ರಾಮದ ಶ್ರೀ ದುಂಡಿ ಬಸವೇಶ್ವರ ದೇವಸ್ಥಾನದಿಂದ ಮೂಲದುರ್ಗಾ ದೇವಸ್ಥಾನದವರೆಗೆ ಶ್ರೀ ದುರ್ಗಾದೇವಿ ಅಂಬಾರಿ ಉತ್ಸವ ನಡೆಯಲಿದೆ. ನೂರಾರು ಮಹಿಳೆಯರ ಪೂರ್ಣ ಕುಂಭಮೇಳ, ವಿವಿಧ ವಾದ್ಯಗಳೊಂದಿಗೆ ವಿಶೇಷ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆ ನಂತರ ದುರ್ಗಾ ದೇವಿಗೆ ಜಲಾಭಿಷೇಕ, ಹೋಮ- ಹವನ, ಭಕ್ತರಿಗೆ ಪ್ರಸಾದ ವಿತರಿಸಲಾಗುವುದು ಎಂದರು.
12ರಂದು ಬೆಳಗ್ಗೆ 8.30ರಿಂದ ನಿರ್ವಿಘ್ನ ಯಾಗ, ಪಂಚವಿಂಶತಿ ಕಲಶಾರಾಧನೆ ಪ್ರಧಾನ ಯಾಗ, ಕುಂಭಾಬಿಷೇಕ, ದುರ್ಗಾ ಸಹಸ್ರನಾಮ, ಕದಳಿ ಯಾಗ ನಡೆಯಲಿದೆ. ಸಂಜೆ 5 ರಿಂದ ಶ್ರೀ ನಾಗದೇವತೆಯರಿಗೆ ನಾಗತನು ತರ್ಪಣ ಪ್ರಸನ್ನ ಪೂಜೆ ಹಮ್ಮಿಕೊಳ್ಳಲಾಗಿದೆ. ಉಡುಪಿ ಕೋರಂಗಪಾಡಿ ಕೆ.ಎಸ್. ಕೃಷ್ಣಮೂರ್ತಿ ತಂತ್ರಿ ಮಾರ್ಗದರ್ಶನದಲ್ಲಿ ಪೂಜೆ ನೇರವೇರಲಿದೆ ಎಂದು ಮಾಹಿತಿ ನೀಡಿದರು.2 ದಿನಗಳ ಕಾರ್ಯಕ್ರಮದಲ್ಲಿ ಹರಿಹರ, ರಾಣೇಬೆನ್ನೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಹತ್ತು ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ನೀರಿಕ್ಷೆಯಿದೆ ಎಂದರು.
- - -