ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ಬುಧವಾರ 12.75 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬಿದೆ. ಈ ಅವಧಿಯಲ್ಲಿ ಕ್ಷೇತ್ರದ ಜನರ ನಿರೀಕ್ಷೆಗೂ ಮೀರಿ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಸಂತಸ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನು ಅನುದಾನ ಕೇಳಿದಾಗಲೆಲ್ಲಾ ಬಿಡುಗಡೆ ಮಾಡಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿಶೇಷವಾಗಿ ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು 1500 ಕೋಟಿ ರು. ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಈಗಾಗಲೇ 800 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಮಂಡಳಿಯ ಸಭೆಯಲ್ಲಿ ಇನ್ನು 500 ಕೋಟಿ ರು. ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದರು.ಈಗಾಗಲೇ ಕ್ಷೇತ್ರದಲ್ಲಿ ರೈತರ ಬಹು ವರ್ಷಗಳ ಸಮಸ್ಯೆಗಳಾಗಿದ್ದ ಸೂಳೆಕೆರೆ, ಅಚ್ಚುಕಟ್ಟು, ಮದ್ದೂರು ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನಾಲೆಗಳ ಆಧುನೀಕರಣದ ಜೊತೆಗೆ ಕೆರೆಗಳ ಪುನಶ್ಚೇತನ ಕಾಮಗಾರಿಯೂ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ಶಿಂಷಾ ನದಿಯ ಬಲ ಮತ್ತು ಎಡ ದಂಡೆ ನಾಲೆಗಳ ಆಧುನೀಕರಣಕ್ಕೂ ಚಾಲನೆ ನೀಡಲಾಗುತ್ತಿದೆ ಎಂದರು.
ಈಗಾಗಲೇ ಮಂಡ್ಯದಿಂದ ಚಂದೂಪುರವರೆಗೂ 25 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಗಲೀಕರಣ ಮಾಡುವ ಜೊತೆಗೆ ಸಿಎ ಕೆರೆ ಹೋಬಳಿಯ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಸಚಿವರಿಗೆ 17 ಕೋಟಿ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು 2 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿರುವುದು ಶ್ಲಾಘನೀಯ. ಶಾಸಕ ತವರು ಗ್ರಾಮ ಕದಲೂರು ಹಾಗೂ ತಾಯಿ ಗ್ರಾಮ ಮಾರಸಿಂಗನಹಳ್ಳಿಯನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು. ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡರಾದ ಕೆ.ಎಂ.ರವಿ, ದೊಡ್ಡ ಗೂಳೀಗೌಡ, ಪುಟ್ಟಸ್ವಾಮಿ, ಗೂಳೀಗೌಡ, ಅಪ್ಪಾಜಣ್ಣ, ಅಡ್ಡರಸ್ತೆ ಗೋಪಿ, ಮಾರಸಿಂಗನಹಳ್ಳಿ ರಾಮಚಂದ್ರ, ಶರತ್, ಗೋವಿಂದ್, ಪ್ರಕಾಶ್, ವಿಜಿ, ಕಿರಣ್, ನವೀನ್, ರಾಘವೇಂದ್ರ, ಶಿವನಂಜಪ್ಪ, ರಾಜಶೇಖರ್, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್ ಮತ್ತಿತರರು ಇದ್ದರು.ತಮಿಳುನಾಡಿನಲ್ಲಿ ಟಿವಿಕೆಯೊಂದಿಗೆ ಕಾಂಗ್ರೆಸ್ ಅಧಿಕಾರ: ಮೇಕೆದಾಟು ಯೋಜನೆಗೆ ಸಹಕಾರಿ
ತಮಿಳುನಾಡು ರಾಜ್ಯದಲ್ಲಿ ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷದೊಂದಿಗೆ ಕಾಂಗ್ರೆಸ್ ಮಿತ್ರಪಕ್ಷವಾಗಿ ಅಧಿಕಾರಕ್ಕೆ ಬಂದಿರುವ ಕಾರಣ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಹಾದಿ ಸಹಕಾರಿಯಾಗಬಹುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ವಿಷಯದಲ್ಲಿ ಹೆಚ್ಚು ಆಸಕ್ತಿ ಇರುವ ಜೊತೆಗೆ ಬೆಂಗಳೂರು ಸೇರಿದಂತೆ ಹಲವು ಪಟ್ಟಣ ಹಾಗೂ ನಗರ ಪ್ರದೇಶದ ಜನತೆಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗಲಿದೆ ಎಂದರು.