ಗದಗ: ಗದಗ ನಗರದ ತೋಂಟದಾರ್ಯ ಕಲ್ಯಾಣಕೇಂದ್ರದಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ತೋಂಟದಾರ್ಯ ಮಠದ ೨೦೨೪ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಶ್ರೀಮಠದ ಸದ್ಭಕ್ತರು ಹಾಗೂ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ಈ ವೇಳೆ ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಎಸ್. ಪಟ್ಟಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಸಾಲಿನ ಜಾತ್ರಾ ಮಹೋತ್ಸವದ ಕೋಶಾಧ್ಯಕ್ಷ ಉಮೇಶ ನಾಲ್ವಾಡ ಲೆಕ್ಕಪತ್ರ ಮಂಡಿಸಿದರು.
ಕಳೆದ ಸಾಲಿನ ಜಾತ್ರಾ ಸಮಿತಿ ಅಧ್ಯಕ್ಷ ಡಾ.ಎಸ್.ಬಿ. ಶೆಟ್ಟರ್, ಡಾ. ಅನಂತ ಶಿವಪೂರ, ಎಂ.ಸಿ. ಐಲಿ, ಎಸ್.ಎನ್. ಬಳ್ಳಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ಸಭೆಯಲ್ಲಿ ಕೆ.ಎಸ್. ಚಟ್ಟಿ, ಎಸ್.ಎಸ್. ಶೆಟ್ಟರ್, ಎಸ್.ಎಸ್. ಪಾಟೀಲ, ಎಸ್.ಎಸ್. ಕಳಸಾಪೂರ, ಬಾಲಚಂದ್ರ ಭರಮಗೌಡರ, ಸಿದ್ಧಣ್ಣ ಬಂಗಾರಶೆಟ್ರ, ವಿವೇಕಾನಂದಗೌಡ ಪಾಟೀಲ, ಕಳೆದ ಸಾಲಿನ ಜಾತ್ರಾ ಸಮಿತಿಯ ಪದಾಧಿಕಾರಿಗಳು, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ಎಂ.ಎಸ್. ಅಂಗಡಿ, ಎಲ್. ನಾರಾಯಣಸ್ವಾಮಿ, ಎಸ್.ಟಿ. ಪಾಟೀಲ, ಗಂಗಾಧರ ಹಿರೇಮಠ, ಅಮರೇಶ ಅಂಗಡಿ, ಜಿ.ಬಿ. ಪಾಟೀಲ, ಎಸ್.ಎಸ್. ಕವಳಿಕಾಯಿ, ವಿರುಪಣ್ಣ ಬಳ್ಳೊಳ್ಳಿ, ಮುರುಗೇಶ ಬಡ್ನಿ, ಅನಿಲಕುಮಾರ ಬೆಳದಡಿ, ಸಿದ್ಧಲಿಂಗೇಶ ಚಳಗೇರಿ, ಮದರಿಮಠ ಸೇರಿದಂತೆ ಶ್ರೀಮಠದ ಸದ್ಭಕ್ತರು ಇದ್ದರು. ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಆಶೀರ್ವದಿಸಿದರು.