ಆಲಮಟ್ಟಿ ಉದ್ಯಾನಕ್ಕೆ ಪ್ರವಾಸಿಗರ ದಂಡು

KannadaprabhaNewsNetwork |  
Published : Jun 09, 2025, 01:18 AM IST
ಆಲಮಟ್ಟಿ | Kannada Prabha

ಸಾರಾಂಶ

ಆಲಮಟ್ಟಿ: ಬಕ್ರೀದ್ ಹಬ್ಬದ ಮಾರನೆಯ ದಿನವಾದ ರವಿವಾರ ಆಲಮಟ್ಟಿಯ ಉದ್ಯಾನವನಗಳು ಜನರಿಂದ ತುಂಬಿ ತುಳುಕುತ್ತಿದ್ದವು. ಭಾನುವಾರ ಉದ್ಯಾನಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ರಾಕ್ ಉದ್ಯಾನ ವನದಲ್ಲಿ ಪ್ರವಾಸಿಗರು ಕಿಕ್ಕಿರಿದು ತುಂಬಿದ್ದರು.

ಆಲಮಟ್ಟಿ: ಬಕ್ರೀದ್ ಹಬ್ಬದ ಮಾರನೆಯ ದಿನವಾದ ರವಿವಾರ ಆಲಮಟ್ಟಿಯ ಉದ್ಯಾನವನಗಳು ಜನರಿಂದ ತುಂಬಿ ತುಳುಕುತ್ತಿದ್ದವು. ಭಾನುವಾರ ಉದ್ಯಾನಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ರಾಕ್ ಉದ್ಯಾನ ವನದಲ್ಲಿ ಪ್ರವಾಸಿಗರು ಕಿಕ್ಕಿರಿದು ತುಂಬಿದ್ದರು.ಪ್ರತಿ ವರ್ಷ ಬಕ್ರೀದ್ ಹಬ್ಬದ ಮರುದಿನ ಮುಸ್ಲಿಂರು ಆಲಮಟ್ಟಿಯ ವಿವಿಧ ಉದ್ಯಾನವನಕ್ಕೆ ಭೇಟಿ ನೀಡುವುದು ಹೆಚ್ಚು. ಬೆಳಿಗ್ಗೆಯಿಂದಲೇ ಕಾರು, ಟಂಟಂ, ಬಸ್ ಹಾಗೂ ರೈಲಿನ ಮೂಲಕ ಆಗಮಿಸಿದ ಸಹಸ್ರಾರು ಪ್ರವಾಸಿಗರು ರಾಕ್ ಉದ್ಯಾನದ ಮುಂದೆ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂತು.

ಮಧ್ಯಾಹ್ನದ ನಂತರ ಉದ್ಯಾನಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಸಂಜೆವರೆಗೂ ಜನ ಬರುತ್ತಲೆ ಇದ್ದರು. ಬುತ್ತಿ ಕಟ್ಟಿಕೊಂಡು ಕುಟುಂಬ ಸಮೇತರಾಗಿ ಬಂದು ರಾಕ್ ಉದ್ಯಾನ ಸೇರಿ ನಾನಾ ಕಡೆಗಳಲ್ಲಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಅಲ್ಲದೇ, ಕೃಷ್ಣಾ ನದಿಯ ತಟದಲ್ಲಿಯೂ ಜನಜಂಗುಳಿ ಹೆಚ್ಚಿತ್ತು. ವಾಹನಗಳು ಹೆಚ್ಚಾಗಿ ಆಗಮಿಸುವ ನಿರೀಕ್ಷೆ ಹಿನ್ನಲೆಯಲ್ಲಿ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಚಕ್ಕುಲಿ, ಐಸ್‌ಕ್ರೀಂ, ನೀರು, ದಿಢೀರ್ ಫೋಟೋ ತೆಗೆಯುವವರ ವ್ಯಾಪಾರ ಜೋರಾಗಿತ್ತು.

ಪ್ರವಾಸಿಗರು ರಾಕ್ ಉದ್ಯಾನದಲ್ಲಿಯೇ ಹೆಚ್ಚು ಕಾಲ ಕಳೆದರು. ಸಂಜೆಯ ವೇಳೆಗೆ ಮೊಘಲ್ ಉದ್ಯಾನದ ಬಳಿ ಜನರು ಹೆಚ್ಚಾಗಿ ಕಂಡು ಬಂದರು. ಸಂಗೀತ ಕಾರಂಜಿ, ಲೇಸರ್ ಫೌಂಟೇನ್ ಗಳನ್ನು ವೀಕ್ಷಿಸಿ ಪ್ರವಾಸಿಗರು ಸಂತಸ ಅನುಭವಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನ ಆಯ್ದ ಸ್ಥಳಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು
ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು