ಕುಶಾಲನಗರ: ಸಾಂಪ್ರದಾಯಿಕ ಪುತ್ತರಿ ನಮ್ಮೆ ಆಚರಣೆ

KannadaprabhaNewsNetwork |  
Published : Dec 17, 2024, 01:02 AM IST
-ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ | Kannada Prabha

ಸಾರಾಂಶ

ಕುಶಾಲನಗರ ಕೊಡವ ಸಮಾಜ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ನಡೆಯಿತು. ಕುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಕದಿರು ತೆಗೆಯಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ನಡೆಯಿತು.

ಕುಶಾಲನಗರ ಕೊಡವ ಸಮಾಜದ ಆವರಣದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ ಸಮುದಾಯ ಬಾಂಧವರು ಮತ್ತು ಸಾರ್ವಜನಿಕರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಅಂಜಪರವಂಡ ಸನ್ನಿ ತಮ್ಮಯ್ಯ ಅವರು ಕುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಸಾಂಪ್ರದಾಯಿಕವಾಗಿ ಕದಿರು ತೆಗೆದರು.

ನಂತರ ಸಮಾಜಕ್ಕೆ ಬಂದು ಕದಿರು ವಿತರಣೆ ನಡೆಯಿತು.

ಈ ಸಂದರ್ಭ ಸಮಾಜದ ಉಪಾಧ್ಯಕ್ಷರಾದ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ಐಲಪಂಡ ಸಂಜು ಬೆಳ್ಳಿಯಪ್ಪ, ಸಹ ಕಾರ್ಯದರ್ಶಿ ಮೈಂದಪಂಡ ಜಗದೀಶ್, ಖಜಾಂಚಿ ಬೊಳ್ಳಚಂಡ ಮುತ್ತಣ್ಣ, ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ