ಕುಷ್ಟಗಿ:
ಪಟ್ಟಣದ ಕಂದಕೂರು ರಸ್ತೆಯಲ್ಲಿರುವ ರೈಲು ನಿಲ್ದಾಣದಲ್ಲಿ ಕಾರ್ಯಕ್ರಮ ಜರುಗಲಿದ್ದು ರೈಲು ಚಾಲನೆಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ. ಪಾಟೀಲ, ಶಾಸಕ ದೊಡ್ಡನಗೌಡ ಪಾಟೀಲ, ಸಂಸದ ರಾಜಶೇಖರ ಹಿಟ್ನಾಳ, ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ವಿಪ ಸದಸ್ಯರಾದ ಶರಣಗೌಡ ಬಯ್ಯಾಪುರ, ಹೇಮಲತಾ ನಾಯಕ, ಶಶಿಲ್ ಜಿ ನಮೋಷಿ, ಚಂದ್ರಶೇಖರ ಪಾಟೀಲ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
17328 ನಂಬರಿನ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬೆಳಗ್ಗೆ 10.30ಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಸಿಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಲಿದ್ದಾರೆ. ಈಗಾಗಲೆ ರೈಲ್ವೆ ಹಳಿ, ಪ್ಲಾಟ್ ಫಾರ್ಮ, ರೈಲ್ವೆ, ಅಧಿಕಾರಿಗಳ ವಸತಿ ಗೃಹ, ಪುಟ್ಬಾತ್, ಟ್ರ್ಯಾಕ್ ಟೇಸ್ಟಿಂಗ್, ರೈಲ್ವೆ ನಿಲ್ದಾಣ ಸೇರಿದಂತೆ ಮೂಲಭೂತ ಸೌಕರ್ಯ ಪೂರೈಸುವ ನಿಟ್ಟಿನಲ್ಲಿ ಕಾಮಗಾರಿಗಳು ಸಂಪೂರ್ಣವಾಗಿದ್ದು ಸಂಚಾರಕ್ಕೆ ಅನುಕೂಲವಾಗಲಿದೆ.ರೈಲು ಸಂಚಾರ ಸಮಯ:
ಸಕಲ ಸಿದ್ಧತೆ:
ರೈಲ್ವೆ ಸಂಚಾರಕ್ಕೆ ಹಸಿರು ನಿಶಾನೆ ತೋರಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಪಟ್ಟಣದಲ್ಲಿ ಬ್ಯಾನರ್ ಬಂಟಿಂಗ್ಸ್, ಪ್ಲೆಕ್ಸ್, ಪಟ್ಟಣದಿಂದ ರೈಲು ನಿಲ್ದಾಣದ ವರೆಗೂ ಅಲ್ಲಲ್ಲಿ ಹಾಕಲಾಗಿದೆ. ರೈಲು ನಿಲ್ದಾಣದ ಸ್ವಚ್ಛತೆಯ ಕಾರ್ಯಗಳು ಭರದಿಂದ ಸಾಗಿದ್ದು ವೇದಿಕೆಯ ಕಾರ್ಯಕ್ರಮಕ್ಕೂ 1000 ಜನರು ಸೇರುವ ಬೃಹತ್ ಗಾತ್ರದ ಪೆಂಡಾಲ್ ಅಳವಡಿಸಲಾಗಿದೆ.ವಾಹನ ವ್ಯವಸ್ಥೆ:
ರೈಲು ನಿಲ್ದಾಣ ಪಟ್ಟಣದಿಂದ 2 ಕಿಲೋ ಮೀಟರ್ ದೂರವಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಬರುವ ಜನರಿಗೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ದಾರಿಯುದ್ದಕ್ಕೂ ನೀರು, ಮಜ್ಜಿಗೆ, ನೆರಳು ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲು ಸಂಘಟಕರು, ಜನಪ್ರತಿನಿಧಿಗಳು ಮುಂದಾಗಿದ್ದಾರೆ.ಈ ರೈಲು ಮಾರ್ಗಕ್ಕಾಗಿ ಅನೇಕ ಹಿರಿಯರು ನಿರಂತರ ಹೋರಾಟ ಮಾಡಿದ್ದರಿಂದ ಪ್ರತಿಫಲ ಸಿಕ್ಕಿದೆ. 1997ರಲ್ಲಿ ರವೀಂದ್ರ ಬಾಕಳೆ ಹಾಗೂ ಶರಣಪ್ಪ ವಡಿಗೇರಿ ಅವರು ತಾಲೂಕು ಕನ್ನಡ ಕ್ರಿಯಾ ಸಮಿತಿಯಿಂದ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಕಾಮಗಾರಿ ಆರಂಭಿಸಲು ಮನವಿ ಮಾಡಿದ್ದನ್ನು ಸ್ಮರಿಸಬಹುದು.