ನಾಯಕತ್ವದ ಗುಣಗಳ ಬೆಳೆಸಲು ತರಬೇತಿ ಶಿಬಿರ ಅವಶ್ಯ-ಹೇಮಗಿರೀಶ

KannadaprabhaNewsNetwork |  
Published : Jun 11, 2025, 12:32 PM IST
10ಎಂಡಿಜಿ2, ಮುಂಡರಗಿ ಪಟ್ಟಣದ  ಶ್ರೀ ಜಗದ್ಗುರು ತೋಂಟದಾರ್ಯ  ಸರ್ಕಾರಿ ಪದವಿ ಕಾಲೇಜಿನಲ್ಲಿ ಜರುಗಿದ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರ 2025 ಮಂಗಳವಾರ ಕಾಲೇಜು ಅಭಿವೃದ್ದಿ ಸಮೀತಿ ಸದಸ್ಯ ಹಾಗೂ ಅತಿಥಿಗಳು ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನಾಯಕತ್ವ ತರಬೇತಿ ಶಿಬಿರಗಳು ಅವಶ್ಯ ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.

ಮುಂಡರಗಿ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನಾಯಕತ್ವ ತರಬೇತಿ ಶಿಬಿರಗಳು ಅವಶ್ಯ ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.

ಅವರು ಮಂಗಳವಾರ ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಂಡರಗಿಯಲ್ಲಿ ಐ.ಕ್ಯೂ.ಎ.ಸಿ. ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಹಯೋಗದಲ್ಲಿ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರ-2025 ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳು, ರಾಜಕಾರಣಿಗಳು, ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು, ರೈತರು ಸೇರಿದಂತೆ ವಿವಿಧ ರಂಗಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ ತರಬೇತಿ ಅವಶ್ಯವಾಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಹಿರಿಯ ಸದಸ್ಯ ಎಸ್.ಎಸ್. ಗಡ್ಡದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಬಿರದಲ್ಲಿ ನಾಯಕತ್ವದ ತತ್ವಗಳು, ನಾಯಕತ್ವದ ಶೈಲಿ, ನಾಯಕತ್ವದ ಸಂವಹನ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವಿಕೆ ತಂಡ ನಿರ್ವಹಣೆ ಮತ್ತು ಸಮಸ್ಯ ಪರಿಹಾರದಂತಹ ವಿಷಯಗಳ ಕುರಿತು ತಿಳಿಸಲಾಗುತ್ತಿದೆ ಎಂದರು.

ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾ.ಉಮಾ ಕೊಳ್ಳಿ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಆರ್.ಎಸ್. ಪಾಟೀಲ, ಆನಂದ ನಾಡಗೌಡರ, ಎಂ.ವಿ. ಅರಳಿ, ಎನ್.ಎನ್. ಗೌಡರ, ಎಚ್. ವಿರೂಪಾಕ್ಷಗೌಡರ, ಜೋತಿ ಹಾನಗಲ್, ಅರುಣಾ ಪಾಟೀಲ, ಎನ್.ಎಸ್. ಎಸ್. ಯೋಜನಾಧಿಕಾರಿ ಕಾವೇರಿ ಬೋಲಾ ಹಾಗೂ ತಿಮ್ಮನಾಯಕ, ಎನ್.ಎಸ್.ಎಸ್ ಶಿಬಿರಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?