ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಅವರು ಸೋಮವಾರ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ, ರಾಜ್ಯಮಟ್ಟದ ಮುಖಂಡರು ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಧಾರ್ಮಿಕ ಮುಖಂಡ ಕಿರಣ್ ಪುಷ್ಪಗಿರಿ, ಸುಲ್ಕೇರಿ ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಸಂಘದ ರಾಜ್ಯಾಧ್ಯಕ್ಷ ಭೀಮಾ ಸೇನಾ ಕೋಕರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ದಕ್ಷಿಣ ಅದ್ಯಕ್ಷ ರಮೇಶ್ ರಾಜು, ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ ಮತ್ತು ಸಂಘದ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಆನೆ ಹಾವಳಿ ಸಮಸ್ಯೆ ಕುರಿತು ಸಂಘ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದು, ಉತ್ತಮ ಸ್ಪಂದನೆ ನೀಡಿದ್ದಾರೆ. ಇನ್ನಿತರ ಕಾಡುಪ್ರಾಣಿ ಹಾವಳಿ ತಡೆಗೆ ಕ್ರಮಕೈಗೊಳ್ಳಲು ಪ್ರಯತ್ನ, ಕೂಲಿ ಕಾರ್ಮಿಕರನ್ನು ನೀಡುವ ನೆಪದಲ್ಲಿ ಕಮಿಷನ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ತಹಸೀಲ್ದಾರ್ ನೇತೃತ್ವದಲ್ಲಿ ಸಮಿತಿ ಮಾಡಬೇಕಾಗಿದೆ. ಈ ಬಗ್ಗೆ ಕೂಡ ಸಂಘ ಪ್ರಯತ್ನಿಸಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ತಾಲೂಕು ಸಮಿತಿ ಸದಸ್ಯೆ ಶೀಲಾ ಕೆ ಉಪಸ್ಥಿತರಿದ್ದರು.