ಮಾವು ಬೇಸಾಯದಲ್ಲಿ ಆಧುನಿಕ ತಾಂತ್ರಿಕತೆಗಳ ಕುರಿತು ರೈತರಿಗೆ ತರಬೇತಿ

KannadaprabhaNewsNetwork |  
Published : Jun 21, 2024, 01:01 AM IST
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಕೆವಿಕೆ ಸಭಾಂಗಣದಲ್ಲಿ ಮಾವು ಬೇಸಾಯದಲ್ಲಿ ಆಧುನಿಕ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಡಾ. ಶಿವಪ್ರಸಾದ ಬಿ.ಎಲ್. ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾವು ಬೇಸಾಯದಲ್ಲಿ ಆಧುನಿಕ ತಾಂತ್ರಿಕತೆಗಳ ಕುರಿತು ಗದಗ ತಾಲೂಕಿನ ಹುಲಕೋಟಿ ಗ್ರಾಮದ ಕೆವಿಕೆ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಜರುಗಿತು. ತಜ್ಞರು ಭಾಗವಹಿಸಿ ರೈತರಿಗೆ ಮಾರ್ಗದರ್ಶನ ನೀಡಿದರು.

ಗದಗ: ತಾಲೂಕಿನ ಹುಲಕೋಟಿ ಗ್ರಾಮದ ಕೆವಿಕೆ ಸಭಾಂಗಣದಲ್ಲಿ ಜಿಪಂ, ತೋಟಗಾರಿಕೆ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಹಾಗೂ ಐ.ಸಿ.ಎ.ಆರ್.-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾವು ಬೇಸಾಯದಲ್ಲಿ ಆಧುನಿಕ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.

ಕೋಲಾರ ಜಿಲ್ಲೆಯ ಹೊಗಳಗೆರೆಯ ಮಾವು ಅಭಿವೃದ್ಧಿ ಕೇಂದ್ರದ ಉಪನಿರ್ದೇಶಕ ಡಾ. ಶಿವಪ್ರಸಾದ.ಬಿ.ಎಲ್. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾವು ಬೆಳೆಯುವ ರೈತರಿಗೆ ಮಾವು ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಹಾಗೂ ಕೊಯ್ಲು ನಂತರದ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಿದರು. ಜತೆಗೆ ಮಾವಿನ ಹಣ್ಣುಗಳನ್ನು ರಫ್ತು ಮಾಡಲು ಕೂಡ ಅವರ ಸಂಸ್ಥೆಯು ಸಲಹೆ, ಮಾರ್ಗದರ್ಶನ ಹಾಗೂ ಸೌಲಭ್ಯಗಳನ್ನು ನೀಡುತ್ತದೆ ಎಂದು ತಿಳಿಸಿದರು.

ರಾಜ್ಯ ಮಟ್ಟದ ಮಾವು ಅಭಿವೃದ್ಧಿ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎಸ್.ವಿ. ಹಿತ್ತಲಮನಿ ಮಾತನಾಡಿ, ಮಾವು ಬೇಸಾಯದ ಕುರಿತು ವೈಜ್ಞಾನಿಕ ತಾಂತ್ರಿಕತೆಗಳು, ಸಲಹೆಗಳು ಹಾಗೂ ಮಾವಿನ ತೋಟಗಳ ನಿರ್ವಹಣೆ ಹಾಗೂ ಮಾವಿನ ಗಿಡಗಳ ಸವರುವಿಕೆಯ ಕುರಿತು ಮಾಹಿತಿ ನೀಡಿದರು.

ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಅವರು, ಗದಗ ಜಿಲ್ಲೆಯಲ್ಲಿನ ಮಾವಿನ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯಸ್ಥೆ ಡಾ. ಸುಧಾ ಮಂಕಣಿ ಮಾತನಾಡಿ, ಈ ತರಬೇತಿ ಗದಗ ಜಿಲ್ಲೆಯ ರೈತರಿಗೆ ಬಹಳ ಅನುಕೂಲವಾಗಿದೆ. ರೈತರಿಗೆ ಹೊಸ ಹೊಸ ತಾಂತ್ರಿಕತೆಗಳು ಉಪಯುಕ್ತವಾಗಿವೆ. ಹೊಸ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಮಾವಿನ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯೋಣ ಎಂದು ತಿಳಿಸಿದರು.

ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಜಿ.ಆರ್. ಓದುಗೌಡರ, ಸುರೇಶ ಕುಂಬಾರ, ಡಾ. ರಫಿ, ಶೈಲೇಂದ್ರ, ಪ್ರಗತಿಪರ ರೈತರಾದ ವಿ.ಜಿ. ಹಿರೇಗೌಡರ, ದೇವೇಂದ್ರಪ್ಪ ಗೊಣೆಪ್ಪನವರ ಇತರರು ಇದ್ದರು. ತಾಂತ್ರಿಕ ಅಧಿವೇಶನದ ಆನಂತರ ಪ್ರಾಯೋಗಿಕವಾಗಿ ಗಿಡಗಳ ಸವರುವಿಕೆ, ಗಿಡಗಳ ಕಾಂಡಕ್ಕೆ ಸಂರಕ್ಷಣಾ ಲೇಪನ ಮಾಡುವುದು ಹಾಗೂ ಮಾವಿನ ಬೆಳೆಯಲ್ಲಿ ಸುಣ್ಣದ ಬಳಕೆ ಮತ್ತು ಹಾಕುವ ಪದ್ಧತಿಯ ಕುರಿತು ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಎನ್.ಎಚ್. ಭಂಡಿ ಸ್ವಾಗತಿಸಿದರು. ಹೇಮಾವತಿ ಹಿರೇಗೌಡರ ಕಾರ್ಯಕ್ರಮ ನಿರೂಪಿಸಿದರು. ಡಾ. ವಿನಾಯಕ ನಿರಂಜನ ವಂದಿಸಿದರು.

PREV

Recommended Stories

ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಶ್ರೀಕಾಂತ ಸ್ಪರ್ಧೆ
ಮೂಡಲಗಿ ಬ್ಯಾಂಕ್‌ನ 3 ಶಾಖೆಗಳು ಪ್ರಗತಿ ಪಥದತ್ತ