-ಸಿ.ಟಿ.ರವಿ ಆರೋಪ । ಬಡವರಿಗೆ ಸರ್ಕಾರ ಹಾಗೂ ಮೋದಿ ಹಣ ಬರುತ್ತದೆ ಎಂದು ನಂಬಿಸಿ ವಂಚನೆ
ಚಿಕ್ಕಮಗಳೂರಿನ ವಿವಿಧ ಬ್ಯಾಂಕ್ಗಳಲ್ಲಿ ಬಡವರ ಆಧಾರ್ ಕಾರ್ಡ್, ಪಾನ್ ಕಾರ್ಡ್ ದುರ್ಬಳಕೆ ಮಾಡಿಕೊಂಡು ಸಾವಿರಾರು ಖಾತೆ ತೆರೆದು ಕೋಟ್ಯಾಂತರ ರು. ಹಣಕಾಸು ವ್ಯವಹಾರ ನಡೆಸಲಾಗಿದೆ. ಇದು ಚಿಕ್ಕಮಗಳೂರಿನ ಇತಿಹಾಸದಲ್ಲೇ ಕಂಡು ಕೇಳರಿಯದ ದೊಡ್ಡ ಆರ್ಥಿಕ ಹಗರಣ. ಪ್ರಕರಣದ ಸಮಗ್ರ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಮೂಲಕ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಆಗ್ರಹಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಡವರಿಗೆ ಸರ್ಕಾರ ಹಾಗೂ ಮೋದಿ ಹಣ ಬರುತ್ತದೆ ಎಂದು ನಂಬಿಸಿ ಅವರ ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು ಹಲವು ಬ್ಯಾಂಕ್ಗಳಲ್ಲಿ ಖಾತೆ ತೆರೆಯಲಾಗಿದೆ. ಖಾತೆದಾರರಿಗೆ ತಿಳಿಯದಂತೆ ಕೋಟ್ಯಾಂತರ ರು. ವಹಿವಾಟು ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ಯಾಂಕ್ ಖಾತೆಗಳ ಪಾಸ್ ಬುಕ್, ಎಟಿಎಂ ಕಾರ್ಡ್ ಹಾಗೂ ಸಿಮ್ ಕಾರ್ಡ್ಗಳನ್ನು ಸಹ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.ಆನ್ಲೈನ್ ಬೆಟ್ಟಿಂಗ್, ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಮೋಸದಿಂದ ಪಡೆದ ಹಣ ಅಥವಾ ಹ್ಯಾಕ್ ಮಾಡಿದ ಖಾತೆಗಳ ಹಣ ವನ್ನು ಈ ರೀತಿಯಲ್ಲಿ ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ. ಆದರೆ, ಕೋಟ್ಯಾಂತರ ರು. ವಹಿವಾಟು ನಡೆದಿರುವುದು ಸ್ಪಷ್ಟ ವಾಗಿದ್ದು, ಅದರ ಮೂಲ ಪತ್ತೆ ಹಚ್ಚುವುದು ಅಗತ್ಯ ಎಂದು ತಿಳಿಸಿದರು.
ಇತ್ತೀಚೆಗೆ ಶಿವಮೊಗ್ಗದಲ್ಲಿ ₹87 ಕೋಟಿ ವಹಿವಾಟು ನಡೆದಿದ್ದ ಪ್ರಕರಣದಲ್ಲಿ ಶಿವಮೊಗ್ಗದ ಜಗದೀಶ್, ಅನಂತ್ ಹಾಗೂ ಚಿಕ್ಕಮ ಗಳೂರಿನ ಅರ್ಷದ್ ಬಂಧನಕ್ಕೊಳಗಾಗಿದ್ದರು. ಆ ಸಂದರ್ಭದಲ್ಲೇ ಚಿಕ್ಕಮಗಳೂರು ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸ ಬೇಕಾಗಿತ್ತು ಎಂದು ಹೇಳಿದರು.
ಈ ಪ್ರಕರಣದಲ್ಲಿ ಕೆಲವು ರಾಜಕಾರಣಿಗಳೊಂದಿಗೆ ಆರೋಪಿಗಳಿಗೆ ಸಂಪರ್ಕವಿರುವ ಫೋಟೋಗಳ ಕುರಿತು ಮಾಹಿತಿ ಹರಿ ದಾಡುತ್ತಿದೆ. ಕೇವಲ ಫೋಟೋ ಇರುವುದರಿಂದ ಯಾರನ್ನೂ ತಪ್ಪಿತಸ್ಥರೆಂದು ಹೇಳುವುದಿಲ್ಲ. ಆದರೆ,ಆರಂಭಿಕ ಹಂತದಲ್ಲೇ ರಾಜಿ ಪಂಚಾಯಿತಿ ನಡೆಸಲು ಅಥವಾ ಪ್ರಕರಣ ಮುಚ್ಚಿಹಾಕಲು ಯಾರಾದರೂ ಪ್ರಭಾವ ಬೀರಿದ್ದಾರೆಯೇ ಎಂಬುದರ ತನಿಖೆಯೂ ನಡೆಯಬೇಕು. ಇತ್ತೀಚೆಗೆ ಒಬ್ಬ ಜನಪ್ರತಿನಿಧಿ ಜನ್ಮದಿನದಂದು ಆರೋಪಿಗಳು ಫ್ಲೆಕ್ಸ್ ಹಾಕಿ ಸಂಭ್ರಮಿಸಿದ್ದಾರೆ ಎಂಬ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದರು.
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಲಭ್ಯ ಮಾಹಿತಿ ಸಲ್ಲಿಸಲಾಗುವುದು ಹಾಗೂ ಕೇಂದ್ರ ಗೃಹ ಸಚಿವರು ಮತ್ತು ರಾಜ್ಯ ಮುಖ್ಯಮಂತ್ರಿಗಳಿಗೆ ಸಿಬಿಐ ಮತ್ತು ಇಡಿ ತನಿಖೆ ಕೋರಿ ಪತ್ರ ಬರೆಯುವುದಾಗಿ ತಿಳಿಸಿದರು.
ಮನೆ ಕೆಲಸ, ಪೌರಕಾರ್ಮಿಕರ ಖಾತೆಗೆಯಲ್ಲಿ ಲಕ್ಷಾಂತರ ಹಣ