ಕನ್ನಡಪ್ರಭ ವಾರ್ತೆ ತುಮಕೂರು
ಮಂಗಳವಾರ ಬೆಳಗ್ಗೆ ದೇವರಾಜ ಅರಸು ಬಸ್ ನಿಲ್ದಾಣದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ ನೂತನ ಕ್ಯಾಂಪಸ್ಗೆ ತೆರಳಲು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಕುರಿತಂತೆ ಚರ್ಚೆ ನಡೆಸಿ, ಪರಿಹರಿಸುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ನಲ್ಲಿ ಅ. ೨೧ ರಿಂದ ವಿಜ್ಞಾನಕ್ಕೆ ಸಂಬಂಧಿಸಿದ ೧೨ ವಿಷಯಗಳ ಪಾಠ, ಪ್ರವಚನಗಳು ಆರಂಭಗೊಂಡಿವೆ. ತುಮಕೂರು ನಗರದಿಂದ ಜ್ಞಾನಸಿರಿ ಕ್ಯಾಂಪಸ್ ಸುಮಾರು ೧೮ ಕಿಮೀ ದೂರದಲ್ಲಿದ್ದು, ಕುಣಿಗಲ್- ತುಮಕೂರು ರಸ್ತೆಯ ನಾಗವಲ್ಲಿ ಗ್ರಾಮದಿಂದ ೨.೫.ಕಿಮೀ ದೂರ ಇದೆ. ವಿವಿಗೆ ತನ್ನದೇ ಆದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನಿವಾರ್ಯವಾಗಿ ವಿದ್ಯಾರ್ಥಿಗಳು ಕೆ.ಎಸ್.ಆರ್.ಟಿ.ಸಿ ಬಸ್ಸುಗಳನ್ನೇ ಆಶ್ರಯಿಸಬೇಕಾಗಿದೆ. ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕ್ಯಾಂಪಸ್ ತಲುಪಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೆ.ಎಸ್. ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಭೇಟಿಯಾಗಿ ಅವರಿಗೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಮನವರಿಕೆ ಮಾಡಿಕೊಡಲಾಗಿದೆ. ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಬಸ್ ವ್ಯವಸ್ಥೆಯಾಗಲಿದೆ ಎಂಬ ಭರವಸೆಯಿದೆ ಎಂದರು.ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ತುಮಕೂರು ವಿವಿಯ ನೂತನ ಬಿದರಕಟ್ಟೆ ಕ್ಯಾಂಪಸ್ಗೆ ಕೆಲ ವಿಷಯಗಳ ಸ್ಥಳಾಂತರಗೊಂಡಿವೆ. ಅಲ್ಲಿಗೆ ತೆರಳಲು ವಿದ್ಯಾರ್ಥಿಗಳಿಗೆ ಸಾರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಇಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳನ್ನು ಮುರುಳೀಧರ ಹಾಲಪ್ಪ ಮತ್ತು ನಾವು ಭೇಟಿಯಾಗಿ ಮನವಿ ಮಾಡಿದ್ದೇವೆ. ಅವರು ಸಹ ಸ್ಪಂದಿಸಿದ್ದಾರೆ. ಪ್ರತಿದಿನ ೯ ಗಂಟೆಯಿಂದ ೧೧ ಗಂಟೆಯವರೆಗೆ ಐದು ಬಸ್ ಮತ್ತು ಸಂಜೆ ೩ ಗಂಟೆಯಿಂದ ೫ ಗಂಟೆಯವರೆಗೆ ಐದು ಬಸ್ಸುಗಳನ್ನು ಓಡಿಸಲು ಒಪ್ಪಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬಸ್ ಓಡಿಸಲು ಸಹ ಒಪ್ಪಿದ್ದಾರೆ. ಇದಕ್ಕಾಗಿ ಮುರುಳೀಧರ ಹಾಲಪ್ಪ ಮತ್ತು ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ವೇಳೆ ತುಮಕೂರು ವಿವಿ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಕರಿಯಣ್ಣ, ಕಾಂಗ್ರೆಸ್ ಮುಖಂಡರಾದ ರೇವಣ್ಣಸಿದ್ದಯ್ಯ, ಗೀತಾರುದ್ರೇಶ್, ನಟರಾಜಶೆಟ್ಟಿ, ಆದಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.