ಮಹಿಳೆಯ 10 ಗ್ರಾಂ ಚಿನ್ನದ ಸರ ಮರಳಿಸಿದ ಸಾರಿಗೆ ಅಧಿಕಾರಿ

KannadaprabhaNewsNetwork |  
Published : Sep 12, 2025, 01:00 AM IST
10 ಗ್ರಾಂ ಚಿನ್ನದ ಸರ | Kannada Prabha

ಸಾರಾಂಶ

ಮಹಾಲಿಂಗಪುರ ನಗರದ ಬಸ್ ನಿಲ್ದಾಣದಲ್ಲಿ ಮಹಿಳೆ ಕಳೆದುಕೊಂಡಿದ್ದ ಸಿಕ್ಕ 10 ಗ್ರಾಂ ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸುವ ಮೂಲಕ ಮಹಾಲಿಂಗಪುರ ಬಸ್‌ ನಿಲ್ದಾಣದ ನಿಯಂತ್ರಣಾಧಿಕಾರಿ ಎಸ್‌.ಪಿ. ಜಂಬಗಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ನಗರದ ಬಸ್ ನಿಲ್ದಾಣದಲ್ಲಿ ಮಹಿಳೆ ಕಳೆದುಕೊಂಡಿದ್ದ ಸಿಕ್ಕ 10 ಗ್ರಾಂ ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸುವ ಮೂಲಕ ಮಹಾಲಿಂಗಪುರ ಬಸ್‌ ನಿಲ್ದಾಣದ ನಿಯಂತ್ರಣಾಧಿಕಾರಿ ಎಸ್‌.ಪಿ. ಜಂಬಗಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಗಡಿಬಿಡಿಯಲ್ಲಿ ಹೋಗುವಾಗ 10 ಗ್ರಾಂ ಚಿನ್ನದ ಬೋರಮಾಳ ಕಳೆದುಕೊಂಡಿದ್ದರು. ಚಿನ್ನದ ಸರ ಬಿದ್ದಿರುವುದನ್ನು ನೋಡಿದ ನಿಯಂತ್ರಣಾಧಿಕಾರಿ ಜಂಬಗಿ ಅವರು ಅಲ್ಲಿಯೇ ಸರ ಹುಡುಕಾಡುತ್ತಿದ್ದ ಮಹಿಳೆಯನ್ನು ಕರೆದು ಮರಳಿ ಒಪ್ಪಿಸಿದ್ದಾರೆ. ಬಸ್ ನಿಲ್ದಾಣ ಅಧಿಕಾರಿಯ ಪ್ರಾಮಾಣಿಕತೆಗೆ ಪ್ರಯಾಣಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ