ಕನ್ನಡಪ್ರಭ ವಾರ್ತೆ ಹೊಸದುರ್ಗ
ತಾಲೂಕಿನ ಸಾಣೇಹಳ್ಳಿಯ ಎಸ್ಎಸ್ ರಂಗಂದಿರದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಬಸವ ಪ್ರತಿಷ್ಠಾನ ಹಾಗೂ ಶ್ರೀ ಶಿವಕುಮಾರ ಕಲಾಸಂಘದ ಆಶ್ರಯದಲ್ಲಿ ಇತ್ತಿಚಿಗೆ ನಡೆದ ಇಂಡೋನೇಷಿಯಾ, ಮಲೇಷಿಯಾ ಹಾಗೂ ಥೈಲ್ಯಾಂಡ್ ದೇಶಗಳ ವಚನ ಸಂಸ್ಕೃತಿ ಯಾತ್ರೆಯ ಅಭಿನಂದನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
ಪ್ರವಾಸದಲ್ಲಿ ನಮ್ಮ ವ್ಯಕ್ತಿತ್ವವನ್ನು ಹೇಗೆ ಕಟ್ಟಿಕೊಳ್ಳಬಹುದು, ಶರಣರ ವಿಚಾರಗಳನ್ನು ಹೇಗೆ ವಿಶ್ವವ್ಯಾಪಿ ಮಾಡಬಹುದು ಎನ್ನುವುದಕ್ಕೆ ಇಂಡೋನೇಷಿಯಾ, ಮಲೇಷಿಯಾ ಹಾಗೂ ಥೈಲ್ಯಾಂಡ್ ಪ್ರವಾಸವೇ ಸಾಕ್ಷಿ . ಇಂತಹ ಕೂಟದಲ್ಲಿ ಸೇರಿಕೊಂಡಾಗ ಹೊಸ ಹೊಸ ಆಲೋಚನೆಯನ್ನು ಮಾಡಲಿಕ್ಕೆ, ಹೊಸ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿಕ್ಕೆ ಇದು ಪ್ರೇರಣೆ ನೀಡಲಿ ಎನ್ನುವುದು ನಮ್ಮ ಆಶಯ ಎಂದರು.ವಿಶ್ವಗುರು ಬಸವಣ್ಣ , ನಮಗೆ ದೀಕ್ಷೆ ನೀಡಿ ನಮ್ಮ ಬದುಕನ್ನು ಕಟ್ಟಿಕೊಟ್ಟ ಪೂಜ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹಾಗೂ ನಮ್ಮ ಭಕ್ತರ ಕೃಪೆಯಿಂದ ಕಳೆದ 45 ವರ್ಷಗಳಲ್ಲಿ ಸಾಣೇಹಳ್ಳಿ ಎಂಬ ಪುಟ್ಟ ಹಳ್ಳಿ ಇಡೀ ರಾಜ್ಯವೆ ತಿರುಗಿ ನೋಡುವಂತೆ ಆಗಿದೆ. ಈ ಮೂರು ಜನರನ್ನು ನಾವು ಎಂದೂ ಮರೆಯಲಿಕ್ಕೆ ಸಾಧ್ಯವಿಲ್ಲ. ಇವತ್ತು ಸಾಣೇಹಳ್ಳಿ ಅಂದರೆ ರಂಗಭೂಮಿ, ಸಾಹಿತ್ಯ ಧರ್ಮದ ನೆಲೆಯಲ್ಲಿ ಎಲ್ಲರೂ ತಿರುಗಿ ನೋಡುವ ಹಾಗೆ ಆಗಿದೆ. ಒಂದು ಕಾಲದಲ್ಲಿ ಮಠಗಳು, ಮಠಾಧೀಶರು ಅಂದರೆ ಮೂಗು ಮುರಿಯುತ್ತಿದ್ದ ಅನೇಕ ವೈಚಾರಿಕರು, ಬಂಡಾಯಗಾರರು , ದಲಿತ ಪ್ರಜ್ಞೆ ಇರುವಂಥವರು ಈಗ ತುಂಬ ಹತ್ತಿರ ಆಗುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಿವರುದ್ರ ಸ್ವಾಮೀಜಿ, ಸಾಹಿತಿ ಬಿ ಆರ್. ಪೋಲಿಸ್ ಪಾಟೀಲ್ , ಶರಣ ಸಾಹಿತ್ಯ ಚಿಂತಕ ರಂಜಾನ್ ದರ್ಗಾ ಮಾತನಾಡಿದರು.
ಸಾ.ನಿ. ರವಿಕುಮಾರ ಸ್ವಾಗತಿಸಿದರೆ ರಾಜು ನಿರೂಪಿಸಿ ವಂದಿಸಿದರು. ರಾಷ್ಟ್ರೀಯ ಬಸವ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಶ್ರೀಮಠದಿಂದ ಅಭಿನಂದಿಸಲಾಯಿತು.-------
9ಎಚ್ಎಸ್ಡಿ1:ಸಾಣೆಹಳ್ಳೀಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.