ಕನ್ನಡಪ್ರಭ ವಾರ್ತೆ ಮಡಿಕೇರಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಬುಧವಾರದಿಂದ ಜೂ.24 ರವರೆಗೆ ಶಿಕ್ಷಕರಿಗಾಗಿ ನಡೆಯುವ ಮೂಲ ತರಬೇತಿ ಮತ್ತು ಮುಂದುವರಿದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿ ಶಿಬಿರಗಳು ಬದಲಾವಣೆಗೆ ದಾರಿಯಾಗಿದ್ದು, ಶಿಸ್ತು ರೂಪಿಸುತ್ತದೆ. ಸಮಾಜಮುಖಿಯಾಗಿ ಬೆಳೆಯಲು ಸಹಕರಿಸುತ್ತದೆ, ಸಕಾರಾತ್ಮಕ ಚಿಂತನೆ, ದೃಢತೆ, ವಿಶ್ವಾಸ ಹೆಚ್ಚಾಗುತ್ತದೆ ಮತ್ತು ನಕಾರಾತ್ಮಕ ಚಿಂತನೆ ಬಿಡಲು ಸಹಕಾರಿಯಾಗಿದೆ ಎಂದರು.ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಎಲ್ಲರಿಗೂ ಉತ್ತಮ ಸಂದೇಶ ನೀಡುತ್ತದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಮಾರ್ಗದರ್ಶನದಲ್ಲಿ ಕೊಂಡೊಯ್ಯಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ನಕರಾತ್ಮಕ ವಿಚಾರಗಳಿಗೆ ವಿದ್ಯಾರ್ಥಿಗಳು ಆಕರ್ಷಿತರಾಗದಂತೆ ನೋಡಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು. ಯಾವಾಗಲು ವಿಭಿನ್ನವಾಗಿ ಆಲೋಚಿಸುವಂತೆ ಮಾಡಬೇಕು. ವಿದ್ಯಾರ್ಥಿಗಳ ಆಸಕ್ತ ವಿಷಯಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಮುಂದಿನ ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಶಿಕ್ಷಕರು ಶಿಲ್ಪಿಗಳಿಗೆ ಸಮಾನ, ವಿದ್ಯಾರ್ಥಿಗಳನ್ನು ತಿದ್ದಿ, ತೀಡಿ ಉತ್ತಮ ಮಾರ್ಗದರ್ಶನ ನೀಡಿದರೆ ನಮ್ಮ ದೇಶದ ಅತ್ಯಮೂಲ್ಯ ವ್ಯಕ್ತಿಗಳಾಗುತ್ತಾರೆ ಎಂದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ಜೂ.24ರ ವರೆಗೆ ನಡೆಯಲಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಶಿಕ್ಷಕರು ಪಾಲ್ಗೊಂಡಿದ್ದಾರೆ. ಶಿಬಿರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲ ಉದ್ದೇಶ, ಧ್ಯೇಯಗಳು, ಧ್ವಜಾರೋಹಣ ಮತ್ತು ಪ್ರಥಮ ಚಿಕಿತ್ಸೆ, ಶಾರೀರಿಕ ವ್ಯಾಯಾಮ, ಕೌಶಲ್ಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸ್ಕೌಟ್ಸ್ ತರಬೇತಿ ಆಯುಕ್ತ ರಂಜಿತ್ ಸ್ವಾಗತಿಸಿದರು. ಪೊನ್ನಂಪೇಟೆ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ವಾಮನ ನಿರೂಪಿಸಿದರು. ಸಹಾಯಕ ತರಬೇತಿ ಆಯುಕ್ತ ಆಲಿಮಾ ವಂದಿಸಿದರು.