ಮರ ಮುರಿದುಬಿದ್ದ ರಸ್ತೆ ಸಂಪರ್ಕ ಕಡಿತ

KannadaprabhaNewsNetwork |  
Published : Jul 09, 2024, 12:58 AM IST
ರಸ್ತೆ ಸಂಪರ್ಕ ಕಡಿತ | Kannada Prabha

ಸಾರಾಂಶ

ಬೃಹತ್‌ ಗಾತ್ರದ ಮರ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆ ವಾಹನಗಳು ಬಳಸು ರಸ್ತೆಯಲ್ಲಿ ಸಾಗಿದವು. ಸಂಜೆ ವೇಳೆ ಮರ ತೆರವುಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ನಾಪೋಕ್ಲು - ಭಾಗಮಂಡಲ ಮುಖ್ಯರಸ್ತೆಯ ಚೋನಕೆರೆ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಮುರಿದುಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿತು. ಭಾರಿ ಮಳೆಯಿಂದಾಗಿ ಮರ ಬುಡ ಸಹಿತ ರಸ್ತೆಗಡ್ಡಲಾಗಿ ಮುರಿದು ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಹನಗಳು ಕುರುಳಿ -ಎಮ್ಮೆ ಮಾಡು ಮುಖಾಂತರ ಬಳಸು ರಸ್ತೆಯಲ್ಲಿ ಸಾಗಿದವು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಣವಟ್ಟೀರ ಕುಶಾಲಪ್ಪ , ನಾಪೋಕ್ಕು ಗ್ರಾಮ ಪಂಚಾಯಿತಿ ಸದಸ್ಯ ಮಾಚೆಟ್ಟಿರ ಕುಶು ಕುಶಾಲಪ್ಪ, ಅರಣ್ಯ ಇಲಾಖೆಯ ಕಾಳೇಗೌಡ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡು ರಸ್ತೆ ಗಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು ಸಂಜೆಯ ವೇಳೆಗೆ ಮರವನ್ನು ತೆರವುಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!