ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

KannadaprabhaNewsNetwork |  
Published : Jul 09, 2025, 12:19 AM IST
8ಎಚ್ಎಸ್ಎನ್4 :  | Kannada Prabha

ಸಾರಾಂಶ

ಬೇಲೂರು: ಚಲಿಸುತ್ತಿದ್ದ ಕಾರಿನ ಮೇಲೆ ಸಿಲ್ವರ್‌ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು, ಚಾಲಕ ಸೇರಿದಂತೆ ಇತರ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಅರೇಹಳ್ಳಿ- ಡೋಲನಮನೆ ರಸ್ತೆಯ ಚೆಕ್‌ ಡ್ಯಾಂ ಬಳಿ ನಡೆದಿದೆ.

ಬೇಲೂರು: ಚಲಿಸುತ್ತಿದ್ದ ಕಾರಿನ ಮೇಲೆ ಸಿಲ್ವರ್‌ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು, ಚಾಲಕ ಸೇರಿದಂತೆ ಇತರ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಅರೇಹಳ್ಳಿ- ಡೋಲನಮನೆ ರಸ್ತೆಯ ಚೆಕ್‌ ಡ್ಯಾಂ ಬಳಿ ನಡೆದಿದೆ.

ಚಾಲಕ ಈಶ್ವರ್‌ ತಮ್ಮ ವೈಯಕ್ತಿಕ ಕೆಲಸ ಮುಗಿಸಿಕೊಂಡು ಹೆಗ್ಗಡಿಹಳ್ಳಿಯಿಂದ ಅರೇಹಳ್ಳಿಗೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬೃಹತ್ ಸಿಲ್ವರ್ ಮರವೊಂದು ಕಾರಿನ ಮೇಲೆ ಬಿದ್ದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸಂತೆಯ ದಿನವಾದ್ದರಿಂದ ಈ ಘಟನೆ ಪರಿಣಾಮ ಕೆಲಕಾಲ ವಾಹನಗಳ ದಟ್ಟಣೆ ಏರ್ಪಟ್ಟಿತ್ತು. ಗ್ರಾಮಸ್ಥರು ಹಾಗೂ ಸಹ ಪ್ರಯಾಣಿಕರು ಕಾರಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ