ವೆಂಕಟೇಶ್ವರ ಏತ ನೀರಾವರಿ ಯೋಜನೆಗೆ ಪ್ರಾಯೋಗಿಕ ಚಾಲನೆ

KannadaprabhaNewsNetwork |  
Published : Jan 28, 2024, 01:19 AM IST
ವೆಂಕಟೇಶ್ವರ ಏತ್ ನೀರಾವರಿ ಯೋಜನೆಗೆ ಪ್ರಾಯೋಗಿಕ ಚಾಲನೆ : ಶಾಸಕ ಸಿದ್ದು ಸವದಿ. | Kannada Prabha

ಸಾರಾಂಶ

ರಬಕವಿ-ಬನಹಟ್ಟಿ: ತಾಲೂಕಿನ ವೆಂಕಟೇಶ್ವರ ಏತ ನೀರಾವರಿ ಯೋಜನೆಯು ನೂರಕ್ಕೆ ನೂರರಷ್ಟು ಮುಕ್ತಾಯಗೊಂಡಿದೆ. ಕೆಲವು ಕಾರಣಗಳಿಂದ ಯೋಜನೆ ವಿಳಂಬವಾಗಿತ್ತು. ಇಂದು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ಶುಕ್ರವಾರ ತಾಲೂಕಿನ ನಾವಲಗಿ ಗ್ರಾಮದ ಹತ್ತಿರ ಇರುವ ಕಾಲುವೆಗೆ ನೀರು ಹರಿಯುತ್ತಿರುವುದನ್ನು ವೀಕ್ಷಣೆ ಮಾಡಿ ಮಾತನಾಡಿ, ವೆಂಕಟೇಶ್ವರ ಏತ ನೀರಾವರಿ ಯೋಜನೆ ಹಾಗೂ ಕುಲಹಳ್ಳಿ ಹುನ್ನೂರು ಏತ ನೀರಾವರಿ ಯೋಜನೆಗಳು ಆರು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದ್ದವು. ಕೆಲವು ಕಾರಣಗಳಿಂದ ವಿಳಂಬವಾಗಿದ್ದವು. ಕುಲಹಳ್ಳಿ ಹನ್ನೂರು ಏತ ನೀರಾವರಿ ಯೋಜನೆಯಿಂದಾಗಿ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಮುಧೋಳದ 14 ಹಳ್ಳಿಗಳ ನೂರಾರು ಜನ ರೈತರ ಸಾವಿರಾರು ಎಕರೆ ಭೂ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂದರು.

ಕನ್ನಡಪ್ರಭ ವಾರ್ತೆ,ರಬಕವಿ-ಬನಹಟ್ಟಿ

ತಾಲೂಕಿನ ವೆಂಕಟೇಶ್ವರ ಏತ ನೀರಾವರಿ ಯೋಜನೆಯು ನೂರಕ್ಕೆ ನೂರರಷ್ಟು ಮುಕ್ತಾಯಗೊಂಡಿದೆ. ಕೆಲವು ಕಾರಣಗಳಿಂದ ಯೋಜನೆ ವಿಳಂಬವಾಗಿತ್ತು. ಇಂದು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಶುಕ್ರವಾರ ತಾಲೂಕಿನ ನಾವಲಗಿ ಗ್ರಾಮದ ಹತ್ತಿರ ಇರುವ ಕಾಲುವೆಗೆ ನೀರು ಹರಿಯುತ್ತಿರುವುದನ್ನು ವೀಕ್ಷಣೆ ಮಾಡಿ ಮಾತನಾಡಿ, ವೆಂಕಟೇಶ್ವರ ಏತ ನೀರಾವರಿ ಯೋಜನೆ ಹಾಗೂ ಕುಲಹಳ್ಳಿ ಹುನ್ನೂರು ಏತ ನೀರಾವರಿ ಯೋಜನೆಗಳು ಆರು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದ್ದವು. ಕೆಲವು ಕಾರಣಗಳಿಂದ ವಿಳಂಬವಾಗಿದ್ದವು. ಕುಲಹಳ್ಳಿ ಹನ್ನೂರು ಏತ ನೀರಾವರಿ ಯೋಜನೆಯಿಂದಾಗಿ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಮುಧೋಳದ 14 ಹಳ್ಳಿಗಳ ನೂರಾರು ಜನ ರೈತರ ಸಾವಿರಾರು ಎಕರೆ ಭೂ ಪ್ರದೇಶಕ್ಕೆ ಅನುಕೂಲವಾಗಲಿದೆ. ರೈತರ ಹಿತದೃಷ್ಟಿಯಿಂದ ಮತ್ತು ಈ ಭಾಗದಲ್ಲಿ ಬೆಳೆಗಳು ಒಣಗುತ್ತಿರುವುದರಿಂದ ನಾಲ್ಕಾರು ದಿನಗಳ ಕಾಲ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಮತ್ತು ಎಂಜಿನಿಯರ್‌ಗಳಿಗೆ ತಿಳಿಸಲಾಗಿದೆ.

ಕುಲಹಳ್ಳಿ ಹುನ್ನೂರು ಏತ ನೀರಾವರಿ ಯೋಜನೆಯ ಪಂಪಹೌಸ್ ನಲ್ಲಿ ಮೋಟರ್ ದುರಸ್ತಿ ಇರುವುದರಿಂದ ವಿಳಂಬವಾಗಿದೆ. ಕೇವಲ ನಾಲ್ಕೈದು ದಿನಗಳಲ್ಲಿ ಅದಕ್ಕೂ ಕೂಡ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯ ಸಚಿವರನ್ನು, ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಅಧಿಕೃತ ಚಾಲನೆಗೆ ದಿನಾಂಕ ನಿರ್ಧರಿಸಲಾಗುವುದು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಎರಡು ಯೋಜನೆಗಳನ್ನು ಆರಂಭಿಸುವಂತೆ ಇಲಾಖೆಯ ಅಧಿಕಾರಗಳಿಗೆ ಸಾಕಷ್ಟು ಬಾರಿ ತಿಳಿಸಲಾಗಿತ್ತು. ಸಭೆಗಳನ್ನು ಕೂಡ ಮಾಡಲಾಗಿತ್ತು. ಆರು ತಿಂಗಳ ಹಿಂದೆಯೇ ನೀರು ಹರಿಸುವಂತೆ ಒತ್ತಾಯ ಮಾಡಲಾಗಿತ್ತು. ಬರಗಾಲ ಇರುವುದರಿಂದ ರೈತರ ಜಮೀನುಗಳಿಗೆ, ಕೆರೆಗಳನ್ನು ತುಂಬಿಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಯಮನವ್ವ ಕಂಚು, ಮುತ್ತಪ್ಪ ಅಂಗಡಿ, ಆನಂದ ಕಂಪು, ಧರೆಪ್ಪ ಉಳ್ಳಾಗಡ್ಡಿ, ಸುರೇಶ ಅಕ್ಕಿವಾಟ, ಲಕ್ಕಪ್ಪ ಪಾಟೀಲ, ಬಸಪ್ಪ ಬಳವಾಡ, ಹನಮಂತ ಸವದಿ, ಹನುಮಂತ ಮಗದುಮ್, ಸಂಗಪ್ಪ ಉಪ್ಪಲದಿನ್ನಿ, ಅನ್ನಪ್ಪ ನಂದಗಾವ, ಶಿವಾಜಿ ಸಾವಂತ, ರೇಖಾ ಕಾಂತಿ, ಶಂಕರ ಹುನ್ನೂರ, ಭಾಗೀರತಿ ಮಗದುಮ್, ಬಸವರಾಜ ಗಣಿ, ಸುಭಾಸ ಕಾಂತಿ, ರಾಜು ಕದಂ ಸೇರಿದಂತೆ ಕುಲಹಳ್ಳಿ, ನಾವಲಗಿ ಗ್ರಾಮದ ರೈತರು ಇದ್ದರು. ವೆಂಕಟೇಶ್ವರ ಏತ ನೀರಾವರಿ ಯೋಜನೆಯಿಂದ ಈ ಭಾಗದ ರೈತರ ದಶಕದ ಕನಸು ಇಂದು ನನಸಾಗಿದೆ. ಸಂತಸ ತಂದಿದೆ. ನೀರಾವರಿ ಯೋಜನೆಯಿಂದಾಗಿ ಈ ಭಾಗದ ರೈತರಿಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಅನುಕೂಲವಾಗಲಿದೆ.

- ಗುರು ಮರಡಿಮ ನಾವಲಗಿ ಗ್ರಾಮದ ರೈತ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಜ್ಮಾನ್‌ನಲ್ಲಿ ತುಂಬೆ ಹೆಲ್ತ್‌ಕೇರ್‌ ಹೈಪರ್‌ಬೇರಿಕ್ ಆಕ್ಸಿಜನ್ ಥೆರಪಿ ಘಟಕ ಉದ್ಘಾಟನೆ
ಪಿವಿಎಸ್‌ ಬಸ್‌ಸ್ಟಾಪ್‌ನಲ್ಲಿ ಕುಡಿವ ನೀರು ಘಟಕಕ್ಕೆ ಶಾಸಕ ಚಾಲನೆ