ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ

KannadaprabhaNewsNetwork |  
Published : May 26, 2025, 12:23 AM IST
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಶಿವಾನಂದ್ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶೃದ್ದಾಂಜಲಿ | Kannada Prabha

ಸಾರಾಂಶ

ಶಿವಾನಂದ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಒಂದು ನಿಮಿಷ ಮೌನಚರಣೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಇಲ್ಲಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಪತ್ರಕರ್ತರಾಗಿಯೂ ಅಪಾರ ಸೇವೆ ಸಲ್ಲಿಸಿದ್ದ ಎಚ್.ಎಂ.ಶಿವಾನಂದ್ ಅವರ ನಿಧನಕ್ಕೆ ಪತ್ರಿಕಾಭವನದಲ್ಲಿ ಶನಿವಾರದಂದು ಶ್ರದ್ಧಾಂಜಲಿ ಸಭೆ ನಡೆಯಿತು. ಶಿವಾನಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಒಂದು ನಿಮಿಷ ಮೌನಚರಣೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭ ಕೊಡಗು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಮುರಳೀಧರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿಜಯ್ ಹಾನಗಲ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್. ಆರ್. ಹರೀಶ್ ಕುಮಾರ್, ಹಿರಿಯ ಪತ್ರಕರ್ತರಾದ ಹಿರಿಕರ ರವಿ, ಡಿ.ಪಿ.ಲೋಕೇಶ್, ಕೆ.ಸಿ.ಇಂದ್ರೇಶ್, ಜಯಪ್ಪ ಹಾನಗಲ್, ದುಷ್ಯಂತಕುಮಾರ್, ತಾಲೂಕು ಕನ್ನಡ ಸಿರಿಬಳಗದ ಅಧ್ಯಕ್ಷ ಎಚ್.ಜೆ.ಜವರಪ್ಪ, ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಉಪಾಧ್ಯಕ್ಷೆ ಸುಮತಿ, ಹಿರಿಯ ಸಾಹಿತಿಗಳಾದ ನ.ಲ.ವಿಜಯ, ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ