ಮೃತ ಉದ್ಯೋಗಾಕಾಂಕ್ಷಿ ಮಾರುತಿಗೆ ಶ್ರದ್ಧಾಂಜಲಿ

KannadaprabhaNewsNetwork |  
Published : Jun 05, 2026, 02:15 AM IST
ಮೃತಪಟ್ಟ ಉದ್ಯೋಗಾಕಾಂಕ್ಷಿ ಮಾರುತಿಗೆ ಶ್ರದ್ಧಾಂಜಲಿ | Kannada Prabha

ಸಾರಾಂಶ

ಹಲವು ವರ್ಷಗಳಿಂದ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೋಸ್ಕರ ತಯಾರಿ ನಡೆಸುತ್ತಿದ್ದ ಮಾರುತಿ (ಮರೆಪ್ಪ)ನ ಅಕಾಲಿಕ ಸಾವು ನೋವಿನ ಸಂಗತಿ. ಇವರಂತೆಯೇ ರಾಜ್ಯದಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮನೆ-ಊರು ಬಿಟ್ಟು ಸಾಲ ಮಾಡಿಯೋ, ಹೊಟ್ಟೆ ಕಟ್ಟಿಯೋ ಧಾರವಾಡದಲ್ಲಿ ಪ್ರತಿದಿನ ಕಷ್ಟಪಟ್ಟು ಓದುತ್ತಿದ್ದಾರೆ.

ಧಾರವಾಡ:

ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ನಡೆಸುತ್ತಿದ್ದ ಸುರಪುರದ ಉದ್ಯೋಗಾಕಾಂಕ್ಷಿ ಮಾರುತಿ ಹೃದಯಘಾತದಿಂದ ಅಕಾಲಿಕವಾಗಿ ಮೃತಪಟ್ಟಿದ್ದು, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಿಚಗಿನ ಕಾಂಪೌಂಡ್ ಪಾರ್ಕ್‌ನಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾರುತಿ ಅವರ ಭಾವಚಿತ್ರಕ್ಕೆ ಎಲ್ಲ ಉದ್ಯೋಗಾಕಾಂಕ್ಷಿಗಳು ಪುಷ್ಪ ನಮನ ಸಲ್ಲಿಸಿದರು.

ಸಮಿತಿಯ ರಾಜ್ಯ ಸಹ ಸಂಚಾಲಕ ಭವಾನಿಶಂಕರ್ ಗೌಡ ಮಾತನಾಡಿ, ಹಲವು ವರ್ಷಗಳಿಂದ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೋಸ್ಕರ ತಯಾರಿ ನಡೆಸುತ್ತಿದ್ದ ಮಾರುತಿ (ಮರೆಪ್ಪ)ನ ಅಕಾಲಿಕ ಸಾವು ನೋವಿನ ಸಂಗತಿ. ಇವರಂತೆಯೇ ರಾಜ್ಯದಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮನೆ-ಊರು ಬಿಟ್ಟು ಸಾಲ ಮಾಡಿಯೋ, ಹೊಟ್ಟೆ ಕಟ್ಟಿಯೋ ಧಾರವಾಡದಲ್ಲಿ ಪ್ರತಿದಿನ ಕಷ್ಟಪಟ್ಟು ಓದುತ್ತಿದ್ದಾರೆ. ಆದರೆ, ರಾಜ್ಯಸರ್ಕಾರ ಕಳೆದ ಮೂರು ವರ್ಷಗಳಿಂದ ಕೇವಲ ಭರವಸೆ ನೀಡುತ್ತಾ ಬಂದಿದೆಯೇ ಹೊರತು ನೇಮಕಾತಿ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕಾರಣಿಗಳ ಆಶ್ವಾಸನೆ ನಂಬಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಅತ್ತ ನೇಮಕಾತಿ ಇಲ್ಲದೇ, ಇತ್ತ ಬದುಕು ಸ್ಥಿರವಿಲ್ಲದೇ ಮಾನಸಿಕವಾಗಿ ಕುಗ್ಗುವಂತಹ ಪರಿಸ್ಥಿತಿ ಎದುರಿಸುತ್ತಿದಾರೆ. ಗುಣಮಟ್ಟದ ಊಟದ ಕೊರತೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿವೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಜಯನಗರ, ಸಪ್ತಾಪುರ, ಶ್ರೀನಗರ, ಕಲ್ಯಾಣನಗರ ಭಾಗದಲ್ಲಿ ನಿಯಮಿತವಾಗಿ ಗುಣಮಟ್ಟದ ಆಹಾರ ದೊರಕುವಂತೆ ಪರಿಶೀಲಿಸಲು ಆಗ್ರಹಿಸಿದರು.

ಸಮಿತಿಯ ಅಮೃತ್ ಜಿ. ಕೊಂಡಿಕೊಪ್ಪ, ಯಲ್ಲಪ್ಪ ದೊರೆ, ಮಲ್ಲೇಶ್ ಚೌಹಾಣ್ ಹಾಗೂ ಉದ್ಯೋಗಾಕಾಂಕ್ಷಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ