ತಿರಂಗಾ ಯಾತ್ರೆಯ ಮೂಲಕ ಭಾರತೀಯ ಸೇನಾಪಡೆಗಳಿಗೆ ಗೌರವಾರ್ಪಣೆ

KannadaprabhaNewsNetwork |  
Published : May 27, 2025, 01:57 AM IST
26ಎಚ್.ಎಲ್,ವೈ-2: ಅಪರೇಶನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಹೆಮ್ಮೆಯ ಭಾರತೀಯ ಸೇನಾಪಡೆಗೆ ಗೌರರ್ವಪಣೆ ಸಲ್ಲಿಸಲು ಸೋಮವಾರ ಪಟ್ಟಣದಲ್ಲಿ ತಿರಂಗಾ ಯಾತ್ರೆಯು ನಡೆಯಿತು. | Kannada Prabha

ಸಾರಾಂಶ

ಪಟ್ಟಣದ ಗಣೇಶ ದೇವಸ್ಥಾನದಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಮುಖ್ಯ ಬೀದಿಗಳಲ್ಲಿ ಸಾಗಿ ಶಿವಾಜಿ ವೃತ್ತದಲ್ಲಿ ಬಂದು ಮುಕ್ತಾಯಗೊಂಡಿತು.

ಹಳಿಯಾಳ: ಆಪರೇಶನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಹೆಮ್ಮೆಯ ಭಾರತೀಯ ಸೇನಾಪಡೆಗೆ ಗೌರವಾರ್ಪಣೆ ಸಲ್ಲಿಸಲು ಸೋಮವಾರ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಡೆಯಿತು.ಪಟ್ಟಣದ ಗಣೇಶ ದೇವಸ್ಥಾನದಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಮುಖ್ಯ ಬೀದಿಗಳಲ್ಲಿ ಸಾಗಿ ಶಿವಾಜಿ ವೃತ್ತದಲ್ಲಿ ಬಂದು ಮುಕ್ತಾಯಗೊಂಡಿತು.

ನಂತರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸುನೀಲ ಹೆಗಡೆ, ಭಾರತೀಯರು ಸೌಮ್ಯ ಮತ್ತು ವಿಶಾಲ ಹೃದಯವುಳ್ಳವರು. ನಾವು ಸರ್ವರನ್ನು ಗೌರವಿಸುತ್ತೇವೆ. ಆದರೆ ನಮ್ಮ ದೇಶದ ಘನತೆಗೆ ಧಕ್ಕೆಯಾದರೆ ನಾವು ಸಹಿಸುವುದಿಲ್ಲ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ದಾಳಿ ಮಾಡುವ ಮೂಲಕ ಭಯೋತ್ಪಾದನೆಗೆ ನಾವು ಯಾವತ್ತೂ ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಆಪರೇಶನ್ ಸಿಂದೂರದ ಮೂಲಕ ನಾವು ಸಾರಿದ್ದೇವೆ. ದೇಶ ರಕ್ಷಣೆಗೆ ನಾವೆಲ್ಲರೂ ಒಂದಾಗಬೇಕಿದೆ. ಭಾರತಾಂಬೆಯ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.

ಮಾಜಿ ವಿಪ ಸದಸ್ಯ ಎಸ್.ಎಲ್. ಘೋಟ್ನೇಕರ ಮಾತನಾಡಿ, ಮುಗ್ಧ ಜನರನ್ನು ಹತ್ಯೆ ಮಾಡಿ ಭಾರತದಲ್ಲಿ ಭಯದ ವಾತಾವರಣ ಪಾಕಿಸ್ತಾನವು ಮಾಡುತ್ತಿತ್ತು. ಆದರೆ ಭಾರತ ಮಾತೆಯ ಹೆಮ್ಮೆಯ ಪುತ್ರರಾಗಿ ಪ್ರಧಾನಿ ಮೋದಿ ದೇಶದ ಘನತೆಯನ್ನು ಹೆಚ್ಚಿಸುವ ಕಾರ್ಯವನ್ನು ಮಾಡುವ ಮೂಲಕ ಎಲ್ಲರಲ್ಲೂ ದೇಶಪ್ರೇಮವನ್ನು ಜಾಗೃತಗೊಳಿಸಿದ್ದಾರೆ ಎಂದರು.

ಯಾತ್ರೆಯುದ್ದಕ್ಕೂ ಭಾರತೀಯ ಸೈನಿಕರಿಗೆ ಜೈ ಘೋಷಣೆ ಹಾಕಿ ನೈತಿಕ ಬೆಂಬಲ ಘೋಷಿಸಲಾಯಿತು. ದೇಶಭಕ್ತಿ ಗೀತೆಗಳೊಂದಿಗೆ ತಿರಂಗಾ ಹಿಡಿದು ನೂರಾರು ಜನ ಮೆರವಣಿಗೆಯಲ್ಲಿ ಹೆಜ್ಜೆಯಿಟ್ಟರು.

ಮಾಜಿ ಸೈನಿಕರು, ನಿವೃತ್ತ ಸರ್ಕಾರಿ ನೌಕರರು, ಕರವೇ, ಹಿರಿಯ ನಾಗರಿಕ ವೇದಿಕೆಯ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಕ್ರಮಣ ಮಾಡಿಕೊಂಡಿದ್ದ ಸರ್ಕಾರಿ ಆಸ್ತಿಗೆ ಬೀಗ
ಸ್ಥಳೀಯ ರೈಲ್ವೆ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲಿಸಿದ ಡಿಐಜಿ ರಶ್ಮಿ