ತುಳು ಜನಪದ ಸಾಹಿತ್ಯಕ್ಕೆ ನಂದಾವರರ ಕೊಡುಗೆ ಶ್ಲಾಘನೀಯ: ಪ್ರದೀಪ್‌ ಕುಮಾರ್‌ ಕಲ್ಕೂರ

KannadaprabhaNewsNetwork |  
Published : Mar 20, 2025, 01:15 AM IST
32 | Kannada Prabha

ಸಾರಾಂಶ

ಕಲ್ಕೂರ ಪ್ರತಿಷ್ಠಾನದ ವತಿಯಿಂದ ಬುಧವಾರ ಮಂಗಳೂರು ಕಲ್ಕೂರ ಕಚೇರಿಯಲ್ಲಿ ದಿ. ವಾಮನ ನಂದಾವರ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದ ನೆರವೇರಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ತುಳುವಿನ ಸಮಗ್ರ ಸಂಸ್ಕೃತಿಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ನಂದಾವರರು ಹೇಮಾಂಶು ಪ್ರಕಾಶನದ ಮೂಲಕ ತಾವು ಹಾಗೂ ತುಳು ಭಾಷಾ ವಿದ್ವಾಂಸರಿಂದ ಪ್ರಕಟಿಸಿದ ತುಳು ಸಾಹಿತ್ಯ ಕೃತಿಗಳ ಮೂಲಕ ತುಳು ಭಾಷೆಯನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ ಎಂದರೆ ತಪ್ಪಾಗಲಾರದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹೇಳಿದರು.

ಕಲ್ಕೂರ ಪ್ರತಿಷ್ಠಾನದ ವತಿಯಿಂದ ಬುಧವಾರ ನಗರದ ಕಲ್ಕೂರ ಕಚೇರಿಯಲ್ಲಿ ದಿ. ವಾಮನ ನಂದಾವರ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿ ಮಾತನಾಡಿದರು.

ಪತ್ನಿ ಚಂದ್ರಕಲಾ ನಂದಾವರರ ಪ್ರೋತ್ಸಾಹದಿಂದ ತುಳು ಭಾಷಾ ಸೌಂದರ್ಯವನ್ನು ಎಳೆ ಎಳೆಯಾಗಿ ಮೊಗೆ ಮೊಗೆದು ನೀಡಿದ ಇವರ ಸಾಧನೆ ಶ್ಲಾಘನೀಯ ಎನ್ನುತ್ತಾ ಈ ಬಗ್ಗೆ ವಿದ್ವಾಂಸರಾದ ದಿವಂಗತ ಕಯ್ಯಾರ, ಪಾ.ವೆಂ. ಆಚಾರ್ಯ, ಡಾ.ಯು.ಪಿ.ಉಪಾಧ್ಯಾಯರೇ ಮೊದಲಾದವರು ಇವರ ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಬಹುಶ್ರುತ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿಯವರು ನಂದಾವರರ ಸಾಹಿತ್ಯ ಸೇವೆಯನ್ನು ಕೊಂಡಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭ ಡಾ.ಗಣೇಶ ಅಮೀನ್ ಸಂಕಮಾರ್, ಭಾಸ್ಕರ ರೈ ಕುಕ್ಕುವಳ್ಳಿ, ನಿತ್ಯಾನಂದ ಕಾರಂತ ಪೊಳಲಿ, ಜಿ.ಕೆ. ಭಟ್ ಸೇರಾಜೆ, ಕೂಡ್ಲು ಮಹಾಬಲ ಶೆಟ್ಟಿ, ಎಚ್.ಜನಾರ್ದನ ಹಂದೆ, ವಿಜಯಲಕ್ಷ್ಮೀ ಬಿ.ಶೆಟ್ಟಿ, ಚಂದ್ರಶೇಖರ ನಾವಡ, ಸಂಜೀವ ಶೆಟ್ಟಿ, ನಿತ್ಯಾನಂದ ರಾವ್, ಸುಂದರ ಶೆಟ್ಟಿ ಬೆಟ್ಟಂಪಾಡಿ, ಚಂದ್ರಶೇಖರ ಮಯ್ಯ, ಪಿ.ಬಿ ಹರೀಶ್ ರೈ, ಬಿ.ಸತೀಶ್ ರೈ ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ