ಕನ್ನಡಪ್ರಭ ವಾರ್ತೆ ಉಡುಪಿ
ಅವರು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಲ್ಲಿ ಅಮೃತ ಸೋಮೇಶ್ವರರ ಸಂತಾಪ ಸಭೆಯಲ್ಲಿ ಮಾತನಾಡುತ್ತಿದ್ದರು. ಹಿರಿಯ ಸಾಹಿತ್ಯ ವಿಮರ್ಷಕ ಪ್ರೊ. ಮುರಳೀಧರ ಉಪಾಧ್ಯಾಯ ಮಾತನಾಡಿ, ಅಮೃತ ಸೋಮೇಶ್ವರರು ಪ್ರಾಧ್ಯಾಪಕರಾಗಿದ್ದಾಗ ಹೇಗೆ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದರು ಎಂಬದನ್ನು ಮತ್ತು ಅವರ ಪುಸ್ತಕಗಳಲ್ಲಿ ಬರೆಯಲ್ಪಟ್ಟ ಹಾಗೂ ಸಂದರ್ಶನಗಳಲ್ಲಿ ಉಲ್ಲೇಖಗೊಂಡಿರುವ ಕೆಲವು ಘಟನೆಗಳನ್ನು ಪ್ರಸ್ತಾಪಿಸುವುದರ ಮೂಲಕ ಅವರ ಆತ್ಮಕ್ಕೆ ಸದ್ಗತಿಯನ್ನು ಕೋರಿದರು.
ಡಾ. ಸುಬ್ಬಣ್ಣಯ್ಯ ಕೋಟಿಗದ್ದೆ ಅವರು ಅಮೃತರ ವಿದ್ಯಾರ್ಥಿಯಾಗಿ ಜೀವನದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಬೃಹತ್ ಕೋಶ ತುಳುನಿಘಂಟು ರಚನಾ ಸಮಿತಿಯ ಸದಸ್ಯರೂ ಆಗಿದ್ದ ಅವರಿಗೆ ಕೇಂದ್ರದ ಮೂಲಕ ಕೊಡಮಾಡುವ ರಾಷ್ಟ್ರಕವಿ ಗೋವಿಂದಪೈ ಪ್ರಶಸ್ತಿಯೂ ಲಭಿಸಿದೆ, ಇವರ ಅಗಲುವಿಕೆ ತುಂಬಾ ನೋವನ್ನುಂಟುಮಾಡಿದೆ ಎಂದರು. ವೇದಿಕೆಯಲ್ಲಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ಸಂಧ್ಯಾಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರೊ.ಕೆ. ಫಣಿರಾಜ್, ತುಳು ನಾಟಕಕಾರ ಗಂಗಾಧರ ಕಿದಿಯೂರು, ರಂಗಕರ್ಮಿ ನಾಗೇಶ್ ಉದ್ಯಾವರ ಮುಂತಾದವರು ಉಪಸ್ಥಿತರಿದ್ದರು.