ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ ಮಾಡಿದ್ದಕ್ಕೆ ಮಕ್ಕಳಿಗೆ ಲಭಿಸಿತು ಪ್ರವಾಸ ಭಾಗ್ಯ!

KannadaprabhaNewsNetwork |  
Published : May 10, 2026, 01:30 AM IST
ಕಡ್ಡಾಯ ಲೀಡ್‌ | Kannada Prabha

ಸಾರಾಂಶ

ಪಟ್ಟಣದ ಪ್ರತಿಷ್ಠಿತ ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಸೇರಿದಂತೆ ಅತ್ಯುತ್ತನ್ನತ ದರ್ಜೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಕರೊಡನೆ ಪ್ರವಾಸಕ್ಕೆ ಕಳುಹಿಸುವ ಮೂಲಕ ಇತರೆ ಖಾಸಗಿ ಶಾಲೆಗಳು ಹಾಗೂ ಪೋಷಕರ ಹುಬ್ಬೇರಿಸುವಂತೆ ಮಾಡಿದೆ.

ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲಾ ಆಡಳಿತ ಮಂಡಳಿ ಕಾರ್ಯಕ್ಕೆ ಮೆಚ್ಚುಗೆ

---ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಪಟ್ಟಣದ ಪ್ರತಿಷ್ಠಿತ ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಸೇರಿದಂತೆ ಅತ್ಯುತ್ತನ್ನತ ದರ್ಜೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಕರೊಡನೆ ಪ್ರವಾಸಕ್ಕೆ ಕಳುಹಿಸುವ ಮೂಲಕ ಇತರೆ ಖಾಸಗಿ ಶಾಲೆಗಳು ಹಾಗೂ ಪೋಷಕರ ಹುಬ್ಬೇರಿಸುವಂತೆ ಮಾಡಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯ ಒಟ್ಟು ೩೪ ವಿದ್ಯಾರ್ಥಿಗಳೆಲ್ಲರೂ ಪಾಸಾಗಿ, ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಬಂದಿತ್ತು. ಅಲ್ಲದೇ ೧೯ ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, ೧೫ ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು.

ಅಮೃತ. ಎಸ್ ೬೧೦ ಅಂಕ, ನವ್ಯ. ಎನ್‌ ೬೦೩ ಅಂಕ, ಗಾನವಿ ಜಿ.ಪಿ ೬೦೨ ಅಂಕ ಪಡೆದು ಶಾಲೆಗೆ ಕೀರ್ತಿ ತಂದರು. ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಗಿಂತಲೂ ಮೇಲ್ಪಟ್ಟು ಪಾಸಾದ ಹಿನ್ನಲೆ ಶಾಲೆಯ ಆಡಳಿತ ಮಂಡಳಿ ಒಪ್ಪಿಗೆ ಪಡೆದ ಶಾಲಾ ಮುಖ್ಯ ಶಿಕ್ಷಕ ರೆವರೆಂಡ್ ಫಾದರ್‌ ಪುತಿಯಾಪರಂಬಿಲ್‌ ಎಸ್‌ಎಸ್‌ಎಲ್‌ಸಿ ಪಾಸಾದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕರೊಂದಿಗೆ ಮಡಿಕೇರಿ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಿಗೆ ತೆರಳಿದ್ದಾರೆ.

ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯ ಆಡಳಿತ ಮಂಡಳಿಯು ಶಾಲಾ ಮಕ್ಕಳು ಮಾಡಿದ ಸಾಧನೆ ಗಮನಿಸಿ ಪ್ರವಾಸ ಭಾಗ್ಯ ಕಳುಹಿಸಿದ್ದಕ್ಕೆ ಹೆಸರೇಳಲಿಚ್ಚಿಸಿದ ಪೋಷಕರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

---ನುಡಿದಂತೆ ನಡೆದ ಮುಖ್ಯ ಶಿಕ್ಷಕಗುಂಡ್ಲುಪೇಟೆ: ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೆ 2 ದಿನಗಳ ಉಚಿತ ಪ್ರವಾಸ ಮಾಡಿಸುತ್ತೇನೆ ಎಂದು ಪರೀಕ್ಷೆಗೂ ಮುನ್ನ ಮುಖ್ಯ ಶಿಕ್ಷಕ ಫಾದರ್‌ ರೆವರೆಂಡ್‌ ಪುತ್ರಿಯಾಪರಂಬಿಲ್‌ ವಿದ್ಯಾರ್ಥಿಗಳಿಗೆ ಮಾತು ಕೊಟ್ಟಿದ್ದರು. ಮಾತಿನಂತೆ ಅವರು ಮಕ್ಕಳೊಂದಿಗೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೂ ಪ್ರವಾಸ ಕಳುಹಿಸುವ ಮೂಲಕ ನುಡಿದಂತೆ ನಡೆದಿದ್ದಾರೆ.

---

೯ಜಿಪಟಿ೬

ಗುಂಡ್ಲುಪೇಟೆ ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯ ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಕರು ಪ್ರವಾಸದಲ್ಲಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ಹಬ್ಬ ಆಚರಿಸಿದ ಅರಕೆರೆ ಗ್ರಾಮಸ್ಥರು