ಕನ್ನಡಪ್ರಭ ವಾರ್ತೆ ಮಂಡ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ಸಭೆ ಕರೆದಿರಲಿಲ್ಲ. ನಮ್ಮ ಪಾಲಿನ ಕಾವೇರಿ ನೀರನ್ನು ಉಳಿಸುವ ಸಲುವಾಗಿ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಕರೆದಿದ್ದ ಸಭೆ ಅದಾಗಿತ್ತು. ಆದರೂ ಸಭೆಯನ್ನು ಎಚ್ಡಿಕೆ ಬಹಿಷ್ಕರಿಸಿದ್ದನ್ನು ರಾಜ್ಯದ ಜನರು ಒಪ್ಪುವುದಿಲ್ಲ. ಇದು ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿದಂತೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ಷೇಪಿಸಿದರು.
ಎಚ್ಡಿಕೆ ಅವರ ನಡವಳಿಕೆಯಿಂದಾಗಿ ‘ದೇಶಕ್ಕಾಗಿ ಮೋದಿ, ಕಾವೇರಿಗಾಗಿ ಕುಮಾರಣ್ಣ’ ಎಂಬುದು ಘೋಷಣೆಯಾಗಿಯೇ ಉಳಿಯದಿರಲಿ. ಎಚ್ಡಿಕೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರು ನೀರು ಬಿಡುವಂತೆ ಒತ್ತಾಯಿಸಿದಾಗ ಕೆಆರ್ಎಸ್ ಜಲಾಶಯದ ಕೀಲಿ ಕೈ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿದೆ ಎಂದಿದ್ದರು. ಆದರೀಗ ಅವರೇ ಕೇಂದ್ರ ಸಚಿವರಾಗಿದ್ದು, ಕೇಂದ್ರ ಸರ್ಕಾರದ ಒಂದು ಭಾಗವಾಗಿದ್ದಾರೆ. ಈಗ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.ಕಾವೇರಿ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಮೇಕೆದಾಟು ಯೋಜನೆಗೆ ಅನುಮತಿ ದೊರಕಿಸಿಕೊಡಲು ಕೇಂದ್ರದ ಮೇಲೆ ಒತ್ತಡ ಹೇರಲಿ. ರಾಜ್ಯದ ಎಲ್ಲ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೇಕೆದಾಟು ಯೋಜನೆಗೆ ಕೇಂದ್ರದ ಅನುಮೋದನೆ ಕೊಡಿಸಸೇಕು. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಜಿಎಸ್ಟಿ ಹಣವನ್ನು ಬಿಡುಗಡೆ ಮಾಡಿಸಬೇಕು. ಅದನ್ನು ಬಿಟ್ಟು ಸೇಡಿನ ರಾಜಕಾರಣ ಮಾಡಬಾರದು ಎಂದು ಒತ್ತಾಯಿಸಿದರು.
106 ಅಡಿ ತಲುಪಿದ ಕೆಆರ್ ಎಸ್ ಗೆ 19,202 ಕ್ಯುಸೆಕ್ ಒಳಹರಿವು
ಕೆಆರ್ ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ
ಹೊರ ಹರಿವು – 2284 ಕ್ಯುಸೆಕ್
ನೀರಿನ ಸಂಗ್ರಹ – 28.072 ಟಿಎಂಸಿ