ಕನ್ನಡಪ್ರಭ ವಾರ್ತೆ ಪಾವಗಡ
ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ವಿ.ರವಿಕುಮಾರ್ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಮಾಡುವುದಕ್ಕೆ ಸರ್ಕಾರ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು, ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರ್ಟಿಐ ಕಾರ್ಯಕರ್ತರು ಹಾಗೂ ಭ್ರಷ್ಟಚಾರ ನಿಗ್ರಹದ ಹೆಸರಿನಲ್ಲಿ ಕೆಲವರು ಸುಖಾ ಸುಮ್ಮನೆ ತಮ್ಮದಲ್ಲದ ಕೆಲಸಗಳಿಗೆ ಭೇಟಿ ನೀಡಿ ವಿಡಿಯೋ ಕವರೇಜ್ ಮಾಡಿ ಸಾಮಾಜಿಕ ಲೈವ್ ಮಾಡಿ ಸಾಮಾಜಿಕ ಜಾಲ ಲೈವ್ ಮಾಡಿ ಹರಿಬಿಡುವ ಪರಿಣಾಮ ನೌಕರರಿಗೆ ಸರ್ಕಾರಿ ಕೆಲಸ ಮಾಡಲು ಬಿಡುತ್ತಿಲ್ಲ ಅರೋಪಿಸಿದರು.
ಕಂದಾಯ ಇಲಾಖೆಯ ಮಹಿಳಾ ನೌಕರರು ಅಳಲು ತೋಡಿಕೊಂಡು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ನೌಕರರು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕಡತಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಮಹಿಳಾ ನೌಕರರ ಉಡುಗೆ-ತೊಡುಗೆಯನ್ನು ಕೇಂದ್ರಿಕರಿಸಿ ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡುವುದಾಗಿ ಹೆದರಿಸುತ್ತಿದ್ದಾರೆ. ಮಹಿಳಾ ನೌಕರರಿಂದ ಹಣಕ್ಕೆ ಬೇಡಿಕೆಯಿಡುವ ಪರಿಪಾಠ ರೂಢಿಸಿಕೊಂಡಿದ್ದು ಅವರಿಗೆ ಬೇಕಾದ ರೀತಿ ಕಡತಗಳನ್ನು ಸಿದ್ಧಡಿಸುವಂತೆ ಒತ್ತಡ ಹೇರಿ ಬ್ಲಾಕ್ ಮೇಲ್ ಮಾಡುತ್ತಾರೆ. ಮಹಿಳಾ ನೌಕರರು ಮಾನಸಿಕವಾಗಿ ಹಿಂಸೆ ಎದುರಿಸುವಂತಾಗಿದೆ. ಮಹಿಳಾ ನೌಕರರು ಕಚೇರಿಗಳಲ್ಲಿ ಮುಜುಗರಕ್ಕೀಡಾಗಿದ್ದು, ಸರ್ಕಾರಿ ಕಚೇರಿಗಳಲ್ಲಿನ ವಿಡಿಯೋ ಮಾಡುವ ಬಗ್ಗೆ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬರುವ ಸಂಬಂಧ ಸರ್ಕಾರದ ಹಂತದಲ್ಲಿ ಕೆಲ ಮಾರ್ಪಾಡುಗಳನ್ನು ತರುಬೇಕು. ದುರುದ್ದೇಷ ಪೂರ್ವಕವಾಗಿ ಈ ರೀತಿ ವಿನಾಕಾರಣ ವಿಡಿಯೋ ಮಾಡುವವರ ಮೇಲೆ ಸೂಕ್ತ ಕಾನೂನಿನ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಬಳಿಕ ತಹಸೀಲ್ದಾರ್ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಈ ಕೂಡಲೇ ವರದಿ ಸಲ್ಲಿಸುವುದಾಗಿ ಹೇಳಿದರು.
-------------------------
ಫೋಟೋ : ಭ್ರಷ್ಟಾಚಾರ ನಿಗ್ರಹದ ಹೆಸರಿನಲ್ಲಿ ಸರ್ಕಾರಿ ನೌಕರರ ವಿಡಿಯೋ ಮಾಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿ ಸರ್ಕಾರಿ ನೌಕರರ ಸಂಘದಿಂದ ಕುಣಿಗಲ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.