ಪಠ್ಯದಾಚೆಗೂ ಜ್ಞಾನ ಬೆಳೆಸುವುದೇ ನಿಜವಾದ ಶಿಕ್ಷಣ

KannadaprabhaNewsNetwork |  
Published : May 23, 2026, 01:15 AM IST
 | Kannada Prabha

ಸಾರಾಂಶ

ಪಠ್ಯದಾಚೆಗೂ ಜ್ಞಾನವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಆ ಕೆಲಸವನ್ನು ಸಿದ್ದಗಂಗಾ ಶಿಕ್ಷಣ ಸಂಸ್ಥೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಬೆಂಗಳೂರಿನ ಎಸ್.ಜೆ.ಆರ್.ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮ ಸಿದ್ದರಾಜು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ. ತುಮಕೂರು

ಪಠ್ಯದಾಚೆಗೂ ಜ್ಞಾನವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಆ ಕೆಲಸವನ್ನು ಸಿದ್ದಗಂಗಾ ಶಿಕ್ಷಣ ಸಂಸ್ಥೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಬೆಂಗಳೂರಿನ ಎಸ್.ಜೆ.ಆರ್.ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮ ಸಿದ್ದರಾಜು ಅಭಿಪ್ರಾಯಪಟ್ಟಿದ್ದಾರೆ.

ನಗರದ ಶ್ರೀಸಿದ್ದಗಂಗಾ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ಕ್ರೀಡೆ, ಸಾಂಸ್ಕೃತಿಕ ಘಟಕ, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಡಾ. ಶಿವಕುಮಾರಸ್ವಾಮೀಜಿಗಳ ಕಂಡ ಕನಸು ನನಸಾಗಿದೆ. ವಿದ್ಯಾರ್ಥಿ ದಿಸೆಯಲ್ಲಿ ಪದವಿ ಎಂಬುದು ಒಂದು ಮಹತ್ವದ ಘಟ್ಟ. ಇಲ್ಲಿ ನೀವು ವಿದ್ಯೆಗೆ ಕಲಿಯುಲು ನೀಡುವ ನಿರಂತರ ಪರಿಶ್ರಮ,ಗುರಿ ಮುಟ್ಟಲು ಆಯ್ಕೆ ಮಾಡಿಕೊಳ್ಳುವ ದಾರಿ ಎರಡು ಬಹಳ ಮುಖ್ಯವಾಗಿರುತ್ತದೆ.ಅದು ನಿಜ ಜೀವನದಲ್ಲಿ ಬರುವ ಅಡ್ಡಿ ಆತಂಕಗಳನ್ನು ಸಮರ್ಥವಾಗಿ ಎದುರಿಸಲು ಸಹಾಯಕಾರಿಯಾಗುತ್ತವೆ. ನಾವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರದ ಬಗ್ಗೆ ಸರಿಯಾದ ಜ್ಞಾನ ಇಲ್ಲದಿದ್ದರೆ ಬದುಕು ಕಟ್ಟಿಕೊಳ್ಳುವುದು ಕಷ್ಟ. ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಯಾದರೂ ಬದಲಾವಣೆಗೆ ತಕ್ಕಂತೆ ನಾವು ಸಹ ಬದಲಾದಾಗ ಮಾತ್ರ ಇಂದಿನ ಯುಗದಲ್ಲಿ ಉಳಿಯಲು ಸಾಧ್ಯ ಎಂದು ನುಡಿದರು. ಗಾಯಕಿ ಶಶಿಕಲಾ ಸುನೀಲ್ ಮಾತನಾಡಿ, ಹೆಣ್ಣು ಎಂದರೆ ಆದಿ ಶಕ್ತಿಯ ಸ್ವರೂಪ. ಆಕೆಗೆ ಸರಿಯಾದ ಮಾರ್ಗದರ್ಶರನ ದೊರೆತರೆ ಅಸಾಧ್ಯವಾದುದ್ದನ್ನು ಸಾಧಿಸಬಲ್ಲಳು ಎಂಬುದಕ್ಕೆ ನಮ್ಮ ನಡುವೆಯೇ ಹಲವಾರು ಉದಾಹರಣೆಗಳಿವೆ. ಸಾಧನೆಗೆ ಅಡ್ಡದಾರಿಗಳಿಲ್ಲ. ದೌರ್ಬಲ್ಯಗಳನ್ನು ಮೆಟ್ಟಿನಿಂತರೆ, ಸಾಧನೆ ನಿಮ್ಮೆದುರು ನಿಲ್ಲುತ್ತದೆ ಎಂದರು.

ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪೂರ್ಣರಾವ್ ಮಾತನಾಡಿ, ಜೀವನದಲ್ಲಿ ನಾವು ಊಹಿಸಲಾರದ ಸವಾಲುಗಳು ನಮ್ಮ ಕಣ್ಣೆದುರು ಬರುತ್ತವೆ. ಆದರೆ ಅವುಗಳನ್ನು ಮೆಟ್ಟಿ ನಿಂತರೆ ನೀವು ಈ ಜಗತ್ತಿನಲ್ಲಿ ಉಳಿಯಲು ಸಾಧ್ಯ ಎಂದರು.

ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಮಾತನಾಡಿ, ಸಾಹಿತ್ಯ, ಸಂಗೀತ, ಕ್ರೀಡೆ ಎಲ್ಲವೂ, ಶಿಕ್ಷಣದಷ್ಟು ಮುಖ್ಯವಾದವು.ಪಠ್ಯಗಳು ಜ್ಞಾನ ನೀಡಿದರೆ, ಪಠ್ಯೇತರ ಚಟುವಟಿಕೆಗಳು ನಾಯಕತ್ವದ ಗುಣ ನೀಡುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ದಕ್ಷಿಣಮೂರ್ತಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜಗದೀಶ್.ಎಂ., ಸಿದ್ದಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಾ.ಡಿ.ಎನ್.ಯೋಗೀಶ್ವರಪ್ಪ ಮಾತನಾಡಿದರು.

ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕರಾದ ಕೆ.ಪಿ.ಶೀಲಾ, ಅಮೂಲ್ಯ .ಜೆ.ಹಾಗೂ ದತ್ತಿ ದಾನಿಗಳು, ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮರಸ್ಯ ಮೂಡಿಸುವಲ್ಲಿ ಹಬ್ಬಗಳ ಪಾತ್ರ ಮಹತ್ವದ್ದು
ಪೌರ ಕಾರ್ಮಿಕರು ನಾಗರಿಕ ಸಮಾಜದ ಬೆನ್ನೆಲುಬು