ಕನ್ನಡಪ್ರಭ ವಾರ್ತೆ ಅಥಣಿ
ಪಟ್ಟಣದಲ್ಲಿ 11ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠ ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲಾ ನ್ಯಾಯಾಲಯದಲ್ಲಿ ಇನ್ನೂ 664 ಪ್ರಕರಣಗಳು ಅನೇಕ ವರ್ಷಗಳಿಂದ ನ್ಯಾಯ ನಿರ್ಣಯವಾಗಿಲ್ಲ. ಅಂತಹ ಪ್ರಕರಣಗಳಿಗೆ ಬರುವ 6 ತಿಂಗಳಲ್ಲಿ ನ್ಯಾಯ ನಿರ್ಣಯವಾಗುವ ನಿಟ್ಟಿನಲ್ಲಿ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು ಕ್ರಿಯಾ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಳೆದ 40 ವರ್ಷಗಳಿಂದ ಇನ್ನೂ ನಿರ್ಣಯವಾಗದ ಪ್ರಕರಣಗಳು ಬಾಕಿ ಇರುವುದರಿಂದ ಇದಕ್ಕೆ ಸೂಕ್ತ ಕಾರಣ ಹುಡುಕಿ ಪರಿಹಾರ ರೂಪಿಸುವುದು ಅಗತ್ಯವಾಗಿದೆ. ಬಾಕಿ ಇರುವ ಪ್ರಕರಣಗಳು ಕೂಡಲೇ ಇತ್ಯರ್ಥವಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲಾ ನ್ಯಾಯಾಲಯ ಸ್ಥಾಪನೆ ಮೂಲಕ ನ್ಯಾಯದೇವತೆ ಇಲ್ಲಿ ಆಗಮಿಸಿದ್ದು, ಪ್ರತಿಯೊಬ್ಬರ ಮನೆಯ ಬಾಗಿಲಿಗೆ ನ್ಯಾಯ ಒದಗಿಸುವ ಕಾರ್ಯವನ್ನು ವಕೀಲರು ಮಾಡಬೇಕು ಎಂದು ಸೂಚಿಸಿದರು.ಹೈಕೋರ್ಟ್ ನ್ಯಾ.ರಾಮಚಂದ್ರ ಹುದ್ದಾರ ಮಾತನಾಡಿ, ಅಥಣಿಯಲ್ಲಿ ಜಿಲ್ಲಾ ನ್ಯಾಯಾಲಯದ ಸ್ಥಾಪನೆಗೊಂಡಿರುವುದರಿಂದ ನ್ಯಾಯವಾದಿಗಳ ಜವಾಬ್ದಾರಿ ಹೆಚ್ಚಿದೆ. ಬಾಕಿ ಇರುವ ಪ್ರಕರಣಗಳಿಗೆ ಬೇಗನೆ ನ್ಯಾಯ ನಿರ್ಣಯ ಕೈಗೊಂಡರೇ ಸರ್ಕಾರದ ಬೊಕ್ಕಸಕ್ಕೂ ಉಳಿತಾಯವಾಗಲಿದೆ ಎಂದು ತಿಳಿಸಿದರು.ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ನ್ಯಾಯದಾನ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಮತ್ತು ನ್ಯಾಯವಾದಿ ಜೊತೆಗೆ ಸಾಕ್ಷಿದಾರನಿಗೆ ಗೌರವ ಸಿಗುತ್ತಿಲ್ಲ. ಜನಸಾಮಾನ್ಯರಿಗೂ ನ್ಯಾಯಾಲಯದಲ್ಲಿ ಗೌರವ ದೊರಕಬೇಕು. ಅನೇಕ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾದ ವ್ಯಕ್ತಿಗಳಿಗೆ ಇನ್ನೂ ನ್ಯಾಯ ದೊರಕಿಲ್ಲ. ಬಾಕಿ ಇರುವ ಪ್ರಕರಣಗಳನ್ನು ಬರುವ 6 ತಿಂಗಳಲ್ಲಿ ಇತ್ಯರ್ಥ ಗೊಳಿಸಬೇಕು. ಜಿಲ್ಲಾಮಟ್ಟದ ನ್ಯಾಯಾಲಯಗಳಲ್ಲಿ ವಕೀಲರ ಚೇಂಬರ್ ಸ್ಥಾಪನೆ ಮಾಡಲಾಗಿದ್ದು, ಅದೇ ಮಾದರಿಯಲ್ಲಿ ತಾಲೂಕು ಮಟ್ಟದಲ್ಲಿಯೂ ವಕೀಲರ ಚೇಂಬರ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಜಯಕುಮಾರ ಪಾಟೀಲ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಟಿ.ಎನ್.ಇನವಳ್ಳಿ, ಅಥಣಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ಎಸ್.ಹುಚಗೌಡರ, ಚಿಕ್ಕೋಡಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸುನೀಲ ಕುಮಾರ ಬಳೋಲ ಉಪಸ್ಥಿತರಿದ್ದರು. ಹಿರಿಯ ನ್ಯಾಯವಾದಿ ಬಿ.ಎಲ್.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ನ್ಯಾಯಮೂರ್ತಿ ಟಿ.ಎನ್.ಇನವಳ್ಳಿ ಸ್ವಾಗತಿಸಿದರು. ನ್ಯಾಯವಾದಿ ಬಾಹುಸಾಹೇಬ ಕಾಂಬಳೆ, ಡಿ.ಎಸ್.ಟಕ್ಕಣ್ಣವರ, ಸುಭಾಷ ನಾಯಿಕ ನಿರೂಪಿಸಿದರು. ಎ.ಎಸ್.ಹುಚ್ಚಗೌಡರ ವಂದಿಸಿದರು.ಅಥಣಿ ನ್ಯಾಯಾಲಯಕ್ಕೆ ಶತಮಾನದ ಇತಿಹಾಸವಿದ್ದು ಭೌಗೋಳಿಕವಾಗಿ ವಿಸ್ತಾರ ಹೊಂದಿದೆ. ಬೆಳಗಾವಿ ಜಿಲ್ಲಾ ಕೇಂದ್ರದಿಂದ ದೂರದಲ್ಲಿರುವ ಅಥಣಿ ಮುರುಘೇಂದ್ರ ಶಿವಯೋಗಿಗಳಂತಹ ಸತ್ಪುರುಷರು ತಿರುಗಾಡಿದ ಪಾವನ ಕ್ಷೇತ್ರವಾಗಿದೆ. ಇಲ್ಲಿ ಸ್ಥಾಪನೆಯಾಗಿರುವ ಜಿಲ್ಲಾ ನ್ಯಾಯಾಲಯ ಪೀಠದ ಸದುಪಯೋಗ ಪಡೆದುಕೊಂಡು ಬಾಕಿ ಇರುವ ಪ್ರಕರಣಗಳಿಗೆ ಬೇಗನೆ ನಿರ್ಣಯ ಕೈಕೊಳ್ಳಬೇಕು.
-ಕೆ.ಎಸ್.ಮುದುಗಲ, ಹೈಕೋರ್ಟ್ ನ್ಯಾಯಮೂರ್ತಿ, ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ.---
-ರಾಮಚಂದ್ರ ಹುದ್ದಾರ,
ವ್ಯಾಜ್ಯ ಮುಕ್ತ ಕಾನೂನು ವ್ಯವಸ್ಥೆ ರೂಢಿಯಲ್ಲಿ ಬಂದರೇ ಅಭಿವೃದ್ಧಿಗೆ ಪೂರಕವಾಗಲಿದೆ. ನ್ಯಾಯ ನಿರ್ಣಯವಾಗಿದ್ದರೂ ಕೂಡ ಕಂದಾಯ ಇಲಾಖೆಯಿಂದ ಅನುಷ್ಠಾನವಾಗದೆ ಇರುವ ವರದಿಗಳ ಬಗ್ಗೆ ಕೂಡಲೇ ಗಮನ ಹರಿಸಲಾಗುವುದು.
--------------ತಿದ್ದುಪಡಿಯಾದ 3 ಕಾನೂನು ಪರಾಮರ್ಶಿಸಿ ರಾಜ್ಯದಲ್ಲಿ ಜಾರಿ: ಸಚಿವ ಎಚ್ಕೆಪಾ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಎಂಬುವುದು ಕೇವಲ ಗಾಳಿ ಸುದ್ದಿಯಾಗಿದ್ದು, ಇದು ಮಾಧ್ಯಮಗಳ ಸೃಷ್ಟಿಯಾಗಿದೆ. ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದಲೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಮನೆ ಮನ ತಲುಪಿರುವುದರಿಂದ ಸರ್ಕಾರದ ಮೇಲೆ ಇನ್ನಷ್ಟು ಅಭಿವೃದ್ಧಿಯೇ ನಿರೀಕ್ಷೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಕೊಳ್ಳಲಾಗುವುದು ಎಂದು ತಿಳಿಸಿದರು.ಮೂಡಾ ನಿಗಮದ ಹಗರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಇಂತಹ ಹಗರಣ ಆಗಿಲ್ಲ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ, ಚಂದ್ರಕಾಂತ ಇಮ್ಮಡಿ, ಅಸ್ಲಂ ನಾಲಬಂದ, ರಾಹುಲ ಮಂಗಸೂಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.