ಕನ್ನಡಪ್ರಭ ವಾರ್ತೆ ಚಡಚಣ
ತಾಲೂಕಿನ ವಿವಿದ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಪಟ್ಟಣದ ಶ್ರೀ ಸಂಗಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಉಪನ್ಯಾಸಕರು ಸಭೆಯಲ್ಲಿ ಅವರು ಮಾತನಾಡಿದರು.
ಪಿಯು ಫಲಿತಾಂಶದಲ್ಲಿ ವಿಜಯಪೂರ ಜಿಲ್ಲೆಯು ಮೊದಲು ಸ್ಥಾನಕ್ಕೆ ಬರಬೇಕಾದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷೇಶ ಮಾರ್ಗದರ್ಶನ ಮಾಡಬೇಕು. ಹಿಂದುಳಿದ ವಿದ್ಯಾರ್ಥಿಗಳು ಉತ್ತೀರ್ಣಗೊಳ್ಳಲು ಅವರಿಗೆ ವಿಶೇಷ ವರ್ಗಗಳನ್ನು ತಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು. ಉಪನ್ಯಾಸಕರು ಇಲಾಖೆಯ ಮಾರ್ಗಸೂಚಿಯಂತೆ ಕೆಲಸ ನಿರ್ವಹಿಸಬೇಕು. ದಿನಚರಿ ಮತ್ತು ಹಾಜರಾತಿ ಪುಸ್ತಗಳನ್ನು ಸರಿಯಾಗಿ ನಿರ್ವವಹಿಸಬೇಕು ಮತ್ತು ಜಾಣ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಉಪನಿರ್ದೇಶಕರು ಅವರಿಗೆ ಹೆಚ್ಚು ಅಂಕಗಳನ್ನು ಪಡೆಯಲು ಮಾರ್ಗದರ್ಶನ ಮಾಡಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಯತ್ನಿಸಲು ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕರ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರು ಸಲಹೆ ನೀಡಿದರು.