ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನಚಿತ್ರ ನಿರ್ಮಾಪಕರ ಸಂಘ ಅಭಿನಂದನೆ

KannadaprabhaNewsNetwork |  
Published : Aug 07, 2024, 01:10 AM IST
ಬಸ್‌ ಸಿಬ್ಬಂದಿಗೆ ಅಭಿನಂದನೆ  | Kannada Prabha

ಸಾರಾಂಶ

ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಖಾಸಗಿ ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಆರ್. ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ ಅಭಿನಂದನೆಗೆ ಅರ್ಹರು. ಇದರ ಜೊತೆಗೆ ತುಳು ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಅಧ್ಯಕ್ಷರು ತೊಡಗಿಸಿ ಕೊಳ್ಳಬೇಕಾಗಿದೆ ಎಂದರು.

ನಿರ್ಮಾಪಕ ಕಿಶೋರ್ ಡಿ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ನಿರ್ಮಾಪಕರಾದ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!