ಕನ್ನಡಪ್ರಭ ವಾರ್ತೆ ತುಮಕೂರು
ಸ್ಥಳೀಯ ಮುಖಂಡರೊಂದಿಗೆ ನರಸಿಂಹಸ್ವಾಮಿಗೆ ಪೂಜೆ ಸಲ್ಲಿಸಿದ ಶಾಸಕರು ನಂತರ ಪೊರಕೆ ಹಿಡಿದು ದೇವಸ್ಥಾನ ಪ್ರಾಂಗಣ ಗುಡಿಸಿ ಸ್ವಚ್ಛಗೊಳಿಸಿದರು. ಶಾಸಕರಿಂದ ಪ್ರೇರಣೆಗೊಂಡ ನಾಗರೀಕ ಮುಖಂಡರು ಸ್ವಚ್ಛತಾಕಾರ್ಯದಲ್ಲಿ ಭಾಗಿಯಾದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಈ ತಿಂಗಳ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮೂರ್ತಿಯ ಪ್ರಾಣಪ್ರತಿಷ್ಠಾನ ಕಾರ್ಯಕ್ರಮ ಭಕ್ತಿ ಸಂಭ್ರಮದಿಂದ ನೆರವೇರುತ್ತಿದೆ. ಇದರ ಅಂಗವಾಗಿ ನಗರದಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ, ದೇವಸ್ಥಾನ ಸ್ವಚ್ಛತೆಯಂತಹ ಹಲವಾರು ಕಾರ್ಯಕ್ರಮಗಳನ್ನು ನಾಗರಿಕರು ಕೈಗೊಂಡಿದ್ದಾರೆ.ಪ್ರಧಾನಿ ಮೋದಿಯವರು ದೇವಸ್ಥಾನ ಸ್ವಚ್ಛತೆಗೆ ಸಂದೇಶ ನೀಡಿರುವುದು ಕೇವಲ ದೇವಸ್ಥಾನ ಮಾತ್ರವಲ್ಲ, ನಮ್ಮ ಸುತ್ತಲಿನ ಪರಿಸರ, ರಸ್ತೆ, ಪಾರ್ಕ್ಗಳ ಸ್ವಚ್ಛತೆ ಮೂಲಕ ಸ್ವಚ್ಛ ಪರಿಸರ ಕಾಪಾಡಿಕೊಳ್ಳುವ ಸ್ವಚ್ಛ ಭಾರತ ಅಭಿಯಾನ ಎಂದು ಹೇಳಿದ ಶಾಸಕರು, ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾನೆ ಸಂದರ್ಭದಲ್ಲಿ ನಗರದ ದೇವಸ್ಥಾನಗಳ ಅಲಂಕಾರ, ವಿಶೇಷ ಪೂಜೆ, ಅನ್ನಸಂತರ್ಪಣೆ, ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರು ಹಮ್ಮಿಕೊಂಡಿದ್ದಾರೆ ಎಂದರು.
ದಿಬ್ಬೂರಿನ ವಿವಿಧ ಸಂಘಟನೆಗಳ ಮುಖಂಡರು, ನಾಗರೀಕರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು.