ಕನ್ನಡಪ್ರಭ ವಾರ್ತೆ ತುಮಕೂರು
ಬಟವಾಡಿಯ ಮಹಾಲಕ್ಷ್ಮಿ ಬಡಾವಣೆಯ 14 ನೇ ಕ್ರಾಸ್ನ ಮನೆಯೊಂದರಲ್ಲಿ ವಾಸವಿರುವ ಹನುಮಂತರಾಜು ಎಂಬುವವರು ಜೀವನಕ್ಕಾಗಿ ಟ್ಯಾಂಕ್ ಕ್ಲಿನಿಂಗ್ ಮತ್ತು ಸೋಲಾರ್ ಸರ್ವಿಸ್ ವೃತ್ತಿಯಲ್ಲಿ ತೊಡಗಿದ್ದು, ಅಸ್ಸಾಂ ಮೂಲದ ನಾಲ್ವರು ಮತ್ತು ಸಂಬಂಧಿಕನಾದ ಮನು ಹಾಗೂ ಸ್ಥಳೀಯರಾದ ಶಶಿಕುಮಾರ್ ಎಂಬ ಆರು ಜನ ಕೆಲಸಗಾರರನ್ನು ಇಟ್ಟುಕೊಂಡು ಕೆಲಸ ನಿರ್ವಹಿಸುತ್ತಿದ್ದರು.
2024ರ ಫೆಬ್ರವರಿ 19 ರಂದು ಸಂಜೆ 5.30ರ ಸುಮಾರಿಗೆ ಹರ್ಷಿತ ಟ್ಯಾಂಕ್ ಕ್ಲಿನಿಂಗ್ನ ಮಾಲೀಕರಾದ ಹನುಮಂತರಾಜು ಅವರ ಬಳಿ ಕೆಲಸ ಮಾಡುವ, ಅವರ ಅಣ್ಣನ ಮಗನಾದ ಮನು ಎಂಬುವವರಿಗೆ ದೂ.ಸಂಖ್ಯೆ ೯೯೦೧೨೩೩೦೨೨ ಕರೆ ಮಾಡಿ, ಮಂಜುನಾಥ ನಗರದ ಮನೆಯೊಂದಕ್ಕೆ ನಾವುಗಳು ಬಾಡಿಗೆಗೆ ಬರಬೇಕೆಂದು ಕೊಂಡಿದ್ದೇವೆ. ಆ ಮನೆಯ ಟ್ಯಾಂಕ್ ಮತ್ತು ಸಂಪ್ ಕ್ಲೀನ್ ಮಾಡುವಂತೆ ತಿಳಿಸಿದ್ದಾರೆ.ಟ್ಯಾಂಕ್ ಕ್ಲೀನ್ ಕೆಲಸ ಸಿಕ್ಕಿದ್ದರಿಂದ ಕೆಲಸ ಮಾಡುತ್ತಿದ್ದ ಹುಡುಗರನ್ನು ಕರೆದುಕೊಂಡು ಹೋಗಿ ಟ್ಯಾಂಕ್ಗೆ ಇಳಿದು ಮೂರು ಜನರು, ಸಂಪ್ ಕ್ಲೀನ್ ಮಾಡಲು ಮೂರು ಜನರು ಇಳಿದು ಕೆಲಸ ಮಾಡುವ ವೇಳೆ ಸಿಂಟೆಕ್ ಟ್ಯಾಂಕ್ನಲ್ಲಿ ಬ್ಯಾಗ್ವೊಂದು ದೊರೆತ್ತಿದ್ದು, ಕ್ಲಿನಿಂಗ್ ಕೆಲಸ ಮುಗಿದ ನಂತರ ಸುಮಾರು ೮ ಗಂಟೆಗೆ ಕೆಲಸ ಹುಡುಗರು, ಸಿಕ್ಕಿದ ಬ್ಯಾಗ್ನ್ನು ಮಾಲೀಕರಾದ ಹುಮಂತರಾಜು ಅವರಿಗೆ ತಲುಪಿಸಿದ್ದಾರೆ.
ಹನುಮಂತರಾಜು ಅವರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.