ತುಮಕೂರು ಕ್ರೀಡಾನಗರಿಯಾಗಿ ಅಭಿವೃದ್ಧಿ

KannadaprabhaNewsNetwork |  
Published : May 06, 2026, 01:30 AM IST
 | Kannada Prabha

ಸಾರಾಂಶ

ಕಲ್ಪತರುನಾಡು ತುಮಕೂರು ನಗರದಲ್ಲಿ ಮೇ 10 ರವರೆಗೆ ಆಯೋಜಿಸಲಾಗಿರುವ ಐಟಿಎಫ್ ಡಬ್ಲ್ಯೂ 35 ರ್‍ಯಾಂಕಿಂಗ್ ತುಮಕೂರು ಓಪನ್ ಟೂರ್ನಿಗೆ ವಿದ್ಯುಕ್ತ ಚಾಲನೆ ದೊರೆಯಿತು

ಕನ್ನಡಪ್ರಭ ವಾರ್ತೆ, ತುಮಕೂರು

ಕಲ್ಪತರುನಾಡು ತುಮಕೂರು ನಗರದಲ್ಲಿ ಮೇ 10 ರವರೆಗೆ ಆಯೋಜಿಸಲಾಗಿರುವ ಐಟಿಎಫ್ ಡಬ್ಲ್ಯೂ 35 ರ್‍ಯಾಂಕಿಂಗ್ ತುಮಕೂರು ಓಪನ್ ಟೂರ್ನಿಗೆ ವಿದ್ಯುಕ್ತ ಚಾಲನೆ ದೊರೆಯಿತು.

ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ವಿಶ್ವ ದರ್ಜೆಯ ಟೆನ್ನಿಸ್ ಅಂಕಣದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಈ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್ , ತುಮಕೂರು ಎಲ್ಲ ರೀತಿಯಲ್ಲೂ ವೇಗವಾಗಿ ಬೆಳೆಯುತ್ತಿರುವ ನಗರ. ಹಾಗಾಗಿ ತುಮಕೂರನ್ನು ಕ್ರೀಡೆಯಲ್ಲೂ ವಿಶ್ವ ದರ್ಜೆ ಮಟ್ಟಕ್ಕೆ ಕೊಂಡೊಯ್ಯುವುದು ತಮ್ಮ ಕನಸಾಗಿದೆ. ರಾಜ್ಯ ಮತ್ತು ದೇಶದಲ್ಲಿ ತುಮಕೂರು ನಗರ ಕ್ರೀಡಾನಗರಿಯಾಗಿ ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡೆಗೆ ಅಗತ್ಯವಾಗಿ ಬೇಕಾಗಿರುವ ಕ್ರೀಡಾಂಗಣ ಸೇರಿದಂತೆ ಎಲ್ಲಾ ಮೂಲ ಸೌಕರ‍್ಯಗಳನ್ನು ಒದಗಿಸುವ ಕೆಲಸ ಮಾಡಲಾಗಿದೆ. ರಾಜಕಾರಣವೂ ಒಂದು ರೀತಿಯ ಕ್ರೀಡೆ ಇದ್ದಂತೆ. ರಾಜಕಾರಣದಲ್ಲಿ ದೈಹಿಕವಾಗಿ ಕ್ರೀಡೆ ಆಡದಿದ್ದರೂ ಮಾನಸಿಕವಾಗಿ ಸದಾ ಕ್ರೀಡಾ ಚಟುವಟಿಕೆಯಿಂದ ಕೂಡಿರಬೇಕು ಎಂದು ಅವರು ತಿಳಿಸಿದರು.

ಕನ್ನಿಕಾ ಪರಮೇಶ್ವರ್ ಮಾತನಾಡಿ, ಟೆನ್ನಿಸ್ ಕ್ರೀಡೆ ಅಷ್ಟು ಸುಲಭವದ ಆಟವಲ್ಲ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರುವ ಜತೆಗೆ ಏಕಾಗ್ರತೆ ಬಹು ಮುಖ್ಯವಾಗಿದೆ ಎಂದರು.

ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್ ಹಾಗೂ ಸಿ.ಬಿ. ಸುರೇಶ್ ಬಾಬು ಅವರು ಮಾತನಾಡಿ, ತುಮಕೂರು ಜಿಲ್ಲೆ ಹಾಗೂ ನಗರವನ್ನು ಶಿಕ್ಷಣದ ಹಬ್ ಜತೆಗೆ ಕ್ರೀಡಾ ಹಬ್ ಆಗಿಯೂ ಬೆಳೆಸುವುದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರ ಕನಸಾಗಿದೆ. ಇದಕ್ಕೆ ನಮ್ಮೆಲ್ಲರ ಸಹಕಾರ ಸದಾ ಇದ್ದೇ ಇರುತ್ತದೆ ಎಂದರು.

ಈ ವೇಳೆ ಶಾಸಕರಾದ ಗೋವಿಂದರಾಜು, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಕಪೂರ್, ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಸುಶಾನ್ ಕಪೂರ್, ಸುಪ್ರೀತ್, ಅಮರನಾಥ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿ.ಪಂ. ಸಿಇಒ ಬಿ.ವಿ. ಅಶ್ವಿಜ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಫ್‌ಐಡಿ ಆದೇಶ ಕೈಬಿಟ್ಟು, ಸಮರ್ಪಕ ಬೀಜ, ರಸಗೊಬ್ಬರ ಪೂರೈಸಿ
ಬೀಗ ಪ್ರಕರಣ ತನಿಖೆಗೆ ಕಠಿಣ ಕ್ರಮಕ್ಕೆ ಶಿವಕುಮಾರಪ್ಪ ಒತ್ತಾಯ