ದೇಶದ ಟಾಪ್-100 ವಿವಿಗಳಲ್ಲಿ ತುಮಕೂರು ವಿವಿಗೆ ಸ್ಥಾನ

KannadaprabhaNewsNetwork |  
Published : Aug 20, 2024, 12:47 AM IST

ಸಾರಾಂಶ

ದೇಶದ ಟಾಪ್-100 ವಿವಿಗಳಲ್ಲಿ ತುಮಕೂರು ವಿವಿಗೆ ಸ್ಥಾನ

ಕನ್ನಡಪ್ರಭ ವಾರ್ತೆ ತುಮಕೂರುರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯಲ್ಲಿ ತುಮಕೂರು ವಿವಿಯು ಮೊದಲ 100 ಸ್ಥಾನಗಳಲ್ಲಿ ಸೇರಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ಹೇಳಿದರು.ತುಮಕೂರು ವಿಶ್ವವಿದ್ಯಾನಿಲಯವು ನಿಟ್ಟೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಂಶೋಧನೆಯನ್ನು ತಂತ್ರಜ್ಞಾನವಾಗಿ ಪರಿವರ್ತಿಸುವ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಗುಣಮಟ್ಟದ ಸಂಶೋಧನೆ, ಪ್ರಾಯೋಗಿಕ ಬೋಧನೆ, ಸಂಶೋಧನೆ ಆಧಾರಿತ ಶಿಕ್ಷಣದಿಂದ ವಿಶ್ವವಿದ್ಯಾನಿಲಯಗಳ ಬೆಳವಣಿಗೆ ವೃದ್ಧಿಯಾಗಲಿದೆ ಎಂದರು.ಕಳೆದ ಒಂದು ವರ್ಷದಲ್ಲಿ ಸಂಶೋಧನ ಧನ ಸಹಾಯ ಸಂಸ್ಥೆಗಳಿಗೆ 80 ಸಂಶೋಧನ ಪ್ರಸ್ತಾವನೆಗಳನ್ನು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಸಲ್ಲಿಸಿದ್ದರು. ಅದರಲ್ಲಿ, 22 ಸಂಶೋಧನೆ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದ್ದು, ₹1.5 ಕೋಟಿಯಷ್ಟು ಧನ ಸಹಾಯದ ಮಾನ್ಯತೆ ದೊರೆತಿರುವುದು ವಿವಿಯ ಸಂಶೋಧನೆ ಗುಣಮಟ್ಟಕ್ಕೆ ನಿದರ್ಶನವಾಗಿದೆ ಎಂದರು.ನಿಟ್ಟೆ ವಿಶ್ವವಿದ್ಯಾನಿಲಯದ ಸಲಹೆಗಾರ ಡಾ.ಇಡ್ಯಾ ಕರುಣಾಸಾಗರ ಮಾತನಾಡಿ, ವಿಭಿನ್ನ ಸಂಶೋಧನ ಕಲ್ಪನೆಯಿಂದ ವಾಣಿಜ್ಯಿಕ ತಂತ್ರಜ್ಞಾನಗಳತ್ತ ಸಾಗಲು ಅನುವು ಮಾಡಿಕೊಡುವುದು ತಂತ್ರಜ್ಞಾನ ಕಾರ್ಯಗತಗೊಳಿಸುವ ಕೇಂದ್ರದ ಧ್ಯೇಯವಾಗಿದೆ. ಸಂಶೋಧನೆಯ ಫಲಿತಾಂಶಗಳು ಸಮಾಜಕ್ಕೆ ತಲುಪಿ, ಅನುಕೂಲವಾಗುವಂತೆ ತಂತ್ರಜ್ಞಾನವಾಗಿ ಪರಿವರ್ತನೆಯಾಗಬೇಕು ಎಂದು ತಿಳಿಸಿದರು.ಸಂಶೋಧನೆಯ ಗರಿಷ್ಠ ಸದುಪಯೋಗಕ್ಕಾಗಿ ವಿಶ್ವವಿದ್ಯಾನಿಲಯದ ವಿವಿಧ ನಿಕಾಯಗಳು ಹಾಗೂ ವಿಭಾಗಗಳು ಸಹಭಾಗಿತ್ವ ಹೊಂದುವ ಅವಶ್ಯಕತೆ ಇದೆ. ಎಲ್ಲ ವಿಶ್ವವಿದ್ಯಾನಿಲಯಗಳು ತಮ್ಮದೇ ಆದ ಸ್ಟಾರ್ಟಪ್ ನೀತಿಯನ್ನು ಜಾರಿಗೆ ತರುವುದು ಇಂದಿನ ಅಗತ್ಯವಾಗಿದೆ ಎಂದರು.ನಿಟ್ಟೆ ವಿಶ್ವವಿದ್ಯಾನಿಲಯದ ಸಂಶೋಧನ ಯೋಜನೆಗಳ ನಿರ್ದೇಶಕಿ ಡಾ.ಇಂದ್ರಾಣಿ ಕರುಣಾಸಾಗರ, ವಿವಿ ಕುಲಸಚಿವೆ ನಾಹಿದಾಜಮ್‌ ಜಮ್,ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ.ಡಿ. ಸುರೇಶ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ. ವಿ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ