ಅಪಾಯಮಟ್ಟದಲ್ಲಿ ತುಂಗಭದ್ರಾ ನದಿ: ಕಟ್ಟೆಚ್ಚರಕ್ಕೆ ಟಾಂ ಟಾಂ

KannadaprabhaNewsNetwork |  
Published : Aug 01, 2024, 12:16 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ತುಂಗಾ ಹಾಗೂ ಭದ್ರಾ ಅಣೆಕಟ್ಟೆಗಳ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ, ಭದ್ರಾ ಜಲಾಶಯ ಭರ್ತಿಯಾಗಿರುವುದು, ತುಂಗಾ ಡ್ಯಾಂ ಎಲ್ಲ ಕ್ರಸ್ಟ್‌ ಗೇಟ್‌ ಮೂಲಕ ನದಿಗೆ ನೀರು ಬಿಡಲಾಗಿದೆ. ಈ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ಹರಿಯುವ ನೀರು 1,44,468 ಕ್ಯುಸೆಕ್‌ಗೆ ಏರಿಕೆಯಾಗಿದೆ. ಇದು ಅಪಾಯದ ಮಟ್ಟವಾಗಿದ್ದು, ನದಿಪಾತ್ರದ ನಿವಾಸಿಗಳು, ಗ್ರಾಮಸ್ಥರು ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.

- ಹೊನ್ನಾಳಿ, ಹರಿಹರ ತಾಲೂಕಿನಲ್ಲಿ ನೆರೆ ಹಾವಳಿ । ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರಕ್ಕೆ ಕ್ರಮ: ಡಿಸಿ

- - -

ಕನ್ನಡಪ್ರಭ ವಾರ್ತೆ, ದಾವಣಗೆರೆ

ತುಂಗಾ ಹಾಗೂ ಭದ್ರಾ ಅಣೆಕಟ್ಟೆಗಳ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ, ಭದ್ರಾ ಜಲಾಶಯ ಭರ್ತಿಯಾಗಿರುವುದು, ತುಂಗಾ ಡ್ಯಾಂ ಎಲ್ಲ ಕ್ರಸ್ಟ್‌ ಗೇಟ್‌ ಮೂಲಕ ನದಿಗೆ ನೀರು ಬಿಡಲಾಗಿದೆ. ಈ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ಹರಿಯುವ ನೀರು 1,44,468 ಕ್ಯುಸೆಕ್‌ಗೆ ಏರಿಕೆಯಾಗಿದೆ. ಇದು ಅಪಾಯದ ಮಟ್ಟವಾಗಿದ್ದು, ನದಿಪಾತ್ರದ ನಿವಾಸಿಗಳು, ಗ್ರಾಮಸ್ಥರು ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.

ಹೊನ್ನಾಳಿ ಪಟ್ಟಣದ ಬಾಲರಾಜ ಘಾಟ್, ಬಂಬೂ ಬಜಾರ್‌, ತಾಲೂಕಿನ ಸಾಸ್ವೇಹಳ್ಳಿ ಇತರೆಡೆ ಶಾಸಕ ಡಿ.ಜಿ.ಶಾಂತನಗೌಡ, ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತುಂಗಾ ಡ್ಯಾಂದಿಂದ 82053, ಭದ್ರಾ ಡ್ಯಾಂದಿಂದ 62415 ಕ್ಯುಸೆಕ್‌ ನೀರು ಬರುತ್ತಿದೆ ಎಂದರು.

ನದಿಗೆ ಇಳಿಯದಂತೆ ಟಾಂ ಟಾಂ- ಬಂದೋಬಸ್ತ್‌:

ನದಿಗೆ ಯಾರೂ ಇಳಿಯದಂತೆ ಜನರಿಗೆ ಎಚ್ಚರಿಸಲಾಗಿದೆ. ತುಂಗಭದ್ರಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಎಸ್‌ಡಿಆರ್‌ಎಫ್, ಅಗ್ನಿಶಾಮಕ ಪಡೆಗಳು ರಕ್ಷಣಾ ಪರಿಕರಗಳೊಂದಿಗೆ ಸನ್ನದ್ಧವಾಗಿವೆ. ಅಪಾಯಕಾರಿ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗ್ರಾಮಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ, ನದಿ ಪಾತ್ರದ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಾಡಳಿತ ಅಧಿಕಾರಿಗಳು ಸೇರಿದಂತೆ ತಹಸೀಲ್ದಾರರು ಕಟ್ಟೆಚ್ಚರ ವಹಿಸಲು ಸೂಚನೆ ನೀಡಿ, ನದಿಗೆ ಇಳಿಯದಂತೆ ಡಂಗುರ (ಟಾಂ ಟಾಂ) ಹೊಡೆಸಲು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ನದಿ ಪ್ರವಾಹದಿಂದ ಕೆಲ ಗ್ರಾಮಗಳ ಸಂಪರ್ಕ ರಸ್ತೆ ಕಡಿತವಾಗಿದೆ. ಅಂತಹ ಕಡೆ ವಾಹನ, ಜನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಹೊನ್ನಾಳಿ ತಾಲೂಕಿನ ವಿಜಯಪುರ-ಕೋಟೆಮಲ್ಲೂರು ರಸ್ತೆ ಬದಲಾಗಿ ಹಾರಕೆರೆ ರಸ್ತೆ, ಕಮ್ಮಾರಗಟ್ಟೆ-ಬೆನಕನಹಳ್ಳಿ ಬದಲಾಗಿ ಕೈಮರ ಕ್ಯಾಂಪ್ ರಸ್ತೆಯಲ್ಲಿ ಸಾಗಬೇಕು. ಹರಿಹರ ತಾ. ನಂದಿಗುಡಿ-ಪತ್ಯಾಪುರ-ಉಕ್ಕಡಗಾತ್ರಿ ರಸ್ತೆ ಸೇತುವೆ ಮುಳುಗಡೆಯಾಗಿದೆ. ಈ ಮಾರ್ಗದ ಬದಲಾಗಿ ನಂದಿಗುಡಿ- ತುಮ್ಮಿನಕಟ್ಟೆ ರಸ್ತೆ ಬಳಕೆಗೆ ಸೂಚಿಸಲಾಗಿದೆ ಎಂದು ಡಿಸಿ ಹೇಳಿದರು.

- - - ಬಾಕ್ಸ್‌-1 * ತುಂಗಭದ್ರಾ 12.57 ಮೀಟರ್ ತಲುಪಿದರೆ ಪ್ರವಾಹ ದಾವಣಗೆರೆ: ಹೊನ್ನಾಳಿಯಲ್ಲಿ ತುಂಗಭದ್ರಾ ನದಿ ನೀರಿನಮಟ್ಟ ಅಳತೆಗೆ ಕೇಂದ್ರ ವಾಟರ್ ಬೋರ್ಡ್‌ನ ಬೇಸ್ ಸ್ಟೇಷನ್ ಇದ್ದು, ಬುಧವಾರ ಸಂಜೆ 6ರ ವೇಳೆಗೆ 12.06 ಮೀಟರ್ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದು ಅಪಾಯ ಮಟ್ಟವಾಗಿದೆ. ಈ ಸ್ಟೇಷನ್‌ನಲ್ಲಿ 10.85 ಮೀಟರ್ ಹರಿವು ದಾಖಲಾದರೆ, ಅಪಾಯದ ಮಟ್ಟವೆಂದೇ ಪರಿಗಣಿಸಲಾಗುತ್ತದೆ. ಒಂದುವೇಳೆ ಅದು 12.57 ಮೀಟರ್ ದಾಖಲಾದರೆ ಪ್ರವಾಹ ಉಂಟಾಗಿ, ಹಾನಿಯ ಮಟ್ಟವೆಂದು ಪರಿಗಣಿಸಲಾಗುತ್ತದೆ. ಪ್ರತಿ ಗಂಟೆಗೆ ಇಲ್ಲಿನ ದಾಖಲೆಯಲ್ಲಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ.

- - -

ಬಾಕ್ಸ್‌-2 * ಸಹಾಯವಾಣಿಗಳ ಸ್ಥಾಪನೆ

ತುರ್ತು ಸಂದರ್ಭ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಜಿಲ್ಲಾಧಿಕಾರಿ ಕೋರಿದ್ದಾರೆ.

- - --31ಕೆಡಿವಿಜಿ10: ಹೊನ್ನಾಳಿ ಪಟ್ಟಣದಲ್ಲಿ ಜನವಸತಿ ಪ್ರದೇಶಕ್ಕೆ ತುಂಗಭದ್ರಾ ನದಿ ನೆರೆ ಬಂದಿರುವುದು.

-31ಕಡಿವಿಜಿ11, 12, 13: ಹರಿಹರ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹಿಂಭಾಗದಲ್ಲಿ ಶಿವನ ಪುತ್ಥಳಿಯನ್ನೂ ದಾಟಿಕೊಂಡು ತುಂಗಭದ್ರಾ ನದಿ ನೆರೆ ಬಂದಿರುವುದು.

-31ಕೆಡಿವಿಜಿ14, 15: ದಾವಣಗೆರೆ ಜಿಲ್ಲೆ ಹೊನ್ನಾಳಿ, ಹರಿಹರ ತಾಲೂಕಿನಲ್ಲಿ ತುಂಗಭದ್ರಾ ನದಿ ನೆರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಸ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸರ್ವ ಸನ್ನದ್ಧವಾಗಿರುವುದು.-31ಕೆಡಿವಿಜಿ16: ಹೊನ್ನಾಳಿ ತಾಲೂಕಿನಲ್ಲಿ ತುಂಗಭದ್ರಾ ನದಿ ನೆರೆ ಬಂದ ಸ್ಥಳಕ್ಕೆ ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಪಂ ಸಿಇಓ ಸುರೇಶ ಬಿ.ಇಟ್ನಾಳ್ ಭೇಟಿ ನೀಡಿ, ಚರ್ಚಿಸುತ್ತಿರುವುದು.

-31ಕೆಡಿವಿಜಿ17: ಹೊನ್ನಾಳಿಯಲ್ಲಿ ತುಂಗಭದ್ರಾ ನದಿ ಅಪಾಯದ ಸ್ಥಿತಿ ತಲುಪಿದ ಹಿನ್ನೆಲೆಯಲ್ಲಿ ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಸನ್ನದ್ಧ‍ಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗರ ಆಕ್ರೋಶ : ರೈಲ್ವೆ ಪರೀಕ್ಷೆ ಮುಂದಕ್ಕೆ
ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆ : ಕೇಂದ್ರ ಷರತ್ತಿನ ಅಸ್ತು