ಕನ್ನಡಪ್ರಭವಾರ್ತೆ ಪಾವಗಡ
ತುಂಗಭದ್ರಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನೇಕ ಯೋಜನೆ ರೂಪಿಸುವ ಮೂಲಕ ರಾಜ್ಯದಲ್ಲಿ ಸಿದ್ದರಾಮಯ್ಯ ಇತಿಹಾಸ ಸೃಷ್ಟಿಸಿದ್ದಾರೆ. ರೈತ ಪರ , ದಲಿತ, ಅಲ್ಪಸಂಖ್ಯಾತ ಹಾಗೂ ಇತರೆ ಎಲ್ಲ ವರ್ಗದ ಪ್ರಗತಿಗೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಯಶಸ್ವಿಯಾಗಿದ್ದಾರೆ. ತಾಲೂಕಿನಲ್ಲಿ ತುಂಗಭದ್ರಾ ಯೋಜನೆ ಜೊತೆಗೆ 3 ಹಾಸ್ಟೆಲ್ಗಳ ಉದ್ಘಾಟನೆ ಸರ್ಕಾರದ ವಿವಿಧ ಇಲಾಖೆಯ ಸೌಲಭ್ಯಗಳನ್ನು ನೀಡಿದ್ದು ಸಂತಸ ತಂದಿದೆ ಎಂದರು.
ಕಳೆದ 25ವರ್ಷದ ಹಿಂದೆ ಇಲ್ಲಿನ ಮಾಜಿ ಸಚಿವ ವೆಂಕಟರಮಣಪ್ಪ, ಶುದ್ದ ನೀರು ಕಲ್ಪಿಸುವಂತೆ ಸರ್ಕಾರದ ಗಮನ ಸೆಳೆದಿದ್ದರು. ಅಂದಿನ ಸಿಎಂ ವಿರೇಂದ್ರಪಾಟೀಲ್ ನಾಗಲಮಡಿಕೆ ಡ್ಯಾಂ ನಿರ್ಮಾಣ ಹಾಗೂ ಇಲ್ಲಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಕಲ್ಪಿಸಲು ಯೋಜನೆ ರೂಪಿಸಿದ್ದರು. ಹುಟ್ಟಿದ ಮಗು ಅಂಗವೈಕಲ್ಯದಿಂದ ಬಳಲುತ್ತಿದ್ದು ಜನಪರ ಸಮಸ್ಯೆ ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ನಮ್ಮ ಇತರೇ ಮುಖಂಡರ ಮನವಿಗೆ ಸ್ಪಂದಿಸಿದ್ದರು. ಇದರಿಂದ 5 ತಾಲೂಕುಗಳ 11,038 ಗ್ರಾಮಗಳಿಗೆ ಶುದ್ಧೀಕರಿಸಿದ ನೀರು ಸರಬರಾಜಾಗಲಿದೆ ಎಂದರು.ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ, 2500ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಸಾಥ್ ನೀಡಿದ ಕಾರಣ ಇಂದು ವಿಶ್ವ ಭೂಪಟದಲ್ಲಿ ಪಾವಗಡ ಹೆಸರು ರಾರಾಜಿಸುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣೀಭೂತರಾಗಿದ್ದು ಶಾಸಕ ವೆಂಕಟೇಶ್ ಮನವಿಗೆ ಸ್ಪಂದಿಸಿ ಇನ್ನೂ 2500ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಅನುಮೋದನೆ ನೀಡಿದ್ದಾರೆ. ಈ ಎರಡು ಯೋಜನೆಗಳಿಂದ ತಾಲೂಕು ಪ್ರಗತಿದತ್ತ ಸಾಗಲು ಸಾಧ್ಯವಾಗಿದೆ ಎಂದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಪ್ಲೊರೈಡ್ ನೀರು ಸೇವನೆಯಿಂದ ತಾಲೂಕಿನ ಜನತೆ ಅನೇಕ ರೋಗಗಳಿಗೆ ಗುರಿಯಾಗಿದ್ದರು. ಈ ಬಗ್ಗೆ ನಾವು ಸರ್ಕಾರದ ಗಮನ ಸೆಳೆಯಲಾಗಿತ್ತು. ತುಂಗಭದ್ರಾ ಜಲಾಶಯದಿಂದ ನೀರು ಸರಬರಾಜು ಅಗಿದ್ದು ಸಂತಸ ತಂದಿದೆ. ಪಾರ್ಲಿಮೆಂಟ್ ಅಧಿವೇಶನವಿದ್ದರೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ಒತ್ತಾಯದ ಮೇರೆಗೆ ಆಗಮಿಸಿ ಭಾಗವಹಿಸಿದ್ದು ಸಂತಸ ತಂದಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕೆ ಸ್ಥಾಪನೆಗೆ ಅವಕಾಶ ಕಲ್ಪಿವಂತೆ ಸಿಎಂ ಗಮನ ಸೆಳೆದರು.
ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆ,ಮಾಜಿ ಸಚಿವ ವೆಂಕಟರಮಣಪ್ಪ, ಆರ್.ರಾಜೇಂದ್ರ, ಶ್ರೀನಿವಾಸ್ , ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು, ಸೋಲಾರ್ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಲ್ಲಿನ ಸೋಲಾರ್ ಅಭಿವೃದ್ಧಿ ಪ್ರಾಧಿಕಾರದ ಎಇಇ ಮಹೇಶ್ ಇತರೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.